* 2047ರ ವೇಳೆಗೆ ವಿಕಸಿತ ಭಾರತ’ ನಮ್ಮ ಗುರಿಯಾಗಿದ್ದು, ದೇಶದ 140 ಕೋಟಿ ಜನರಿಂದ ಹೊಸ ಭಾರತ ನಿರ್ಮಾಣವಾಗಲಿದೆ' ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆಗಸ್ಟ್ 15 ರಂದು (ಗುರುವಾರ) ತಿಳಿಸಿದರು.* ದೆಹಲಿಯ ಕೆಂಪುಕೋಟೆಯ ಮೇಲೆ 78ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿದ್ದಾರೆ. ಧ್ವಜಾರೋಹಣದ ಬಳಿಕ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು ದೇಶದ ಜನತೆಯನ್ನುದ್ದೇಶಿಸಿ ಮೋದಿಯವರು ಭಾಷಣ ಮಾಡಿದರು.* 2036ರಲ್ಲಿ ಒಲಿಂಪಿಕ್ ಕ್ರೀಡಾಕೂಟವನ್ನು ಭಾರತ ಆಯೋಜಿಸುವ ಕನಸು ಹೊಂದಿದ್ದು, ಅತಿದೊಡ್ಡ ಕ್ರೀಡಾಕೂಟ ಆಯೋಜನೆಗೆ ದೇಶ ತಯಾರಾಗುತ್ತಿದೆ. ಭಾರತದ ಬೃಹತ್ ಪಡೆ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾಗವಹಿಸಲು ಪ್ಯಾರಿಸ್‌ಗೆ ತೆರಳಲಿದೆ.* ಭಾರತದಲ್ಲಿ ಯಶಸ್ವಿಯಾಗಿ ಜಿ20 ಶೃಂಗಸಭೆಯನ್ನು ಆಯೋಜಿಸುವುದರ ಜೊತೆಗೆ ರಾಷ್ಟ್ರದಾದ್ಯಂತ 200ಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ಆಯೋಜಿಸಿದೆ. ಇದರಂತೆ 2036ರ ಒಲಿಂಪಿಕ್ಸ್ ಅನ್ನು ಆಯೋಜಿಸುವುದು ಈಗ ಭಾರತದ ಕನಸು ಎಲ್ಲಾ ಮತ್ತು ಅದಕ್ಕಾಗಿ ತಯಾರಿ ನಡೆಸಲಾಗುತ್ತಿದೆ ಎಂದು ಪ್ರಧಾನಿ ಮೋದಿ ಅವರು ತಿಳಿಸಿದ್ದಾರೆ.* ಪ್ರಧಾನಿ ನರೇಂದ್ರ ಮೋದಿಯವರ ಭಾಷಣದ ಪ್ರಮುಖಾಂಶಗಳು:- "ಹೊಸ ಕ್ರಿಮಿನಲ್ ಕಾನೂನು, ಭಾರತೀಯ ನ್ಯಾಯ ಸಂಹಿತಾ 2023, ಕಾನೂನು ವ್ಯವಸ್ಥೆಯನ್ನು ಸುಧಾರಿಸಿದೆ. ನಾವು ಹೊಸ ಕ್ರಿಮಿನಲ್ ಕಾನೂನುಗಳಲ್ಲಿ ಶಿಕ್ಷೆಗಿಂತ ನ್ಯಾಯಕ್ಕೆ ಆದ್ಯತೆ ನೀಡಿದ್ದೇವೆ.- "ಭಾರತವು ಯಾವುದೇ ವಿಳಂಬವಿಲ್ಲದೆ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಬೇಕು."- 2047ರ ವೇಳೆಗೆ ಭಾರತವನ್ನು ಅಭಿವೃದ್ಧಿಪಡಿಸಲು ಜನರು ಅನೇಕ ಸಲಹೆಗಳನ್ನು ನೀಡಿದ್ದಾರೆ. ವಿಕ್ಷಿತ್ ಭಾರತ್ ಗಾಗಿ ಆಡಳಿತ ಸುಧಾರಣೆಗಳು, ತ್ವರಿತ ನ್ಯಾಯ ವಿತರಣಾ ವ್ಯವಸ್ಥೆ, ಸಾಂಪ್ರದಾಯಿಕ ಔಷಧಗಳನ್ನು ಉತ್ತೇಜಿಸುವುದು ಸೇರಿ ಅನೇಕ ಸಲಹೆಗಳು ಬಂದಿವೆ.- ಜಲ ಜೀವನ್ ಮಿಷನ್ 15 ಕೋಟಿ ಫಲಾನುಭವಿಗಳನ್ನು ತಲುಪಿದೆ.- ಸುಧಾರಣೆಗಳ ಕಡೆಗೆ ನಮ್ಮ ಸಮರ್ಪಣೆ ಕೇವಲ ಕಾಗದಗಳಿಗೆ ಸೀಮಿತವಾಗಿಲ್ಲ, ನಾವು ಅದನ್ನು ಸಾಕಾರ ಮಾಡಿ ತೋರಿಸಿದ್ದೇವೆ.- "ವೋಕಲ್ ಫಾರ್ ಲೋಕಲ್ (ಸ್ಥಳೀಯರಿಗಾಗಿ ಧ್ವನಿ) ಎಂಬ ಪರಿಕಲ್ಪನೆ ಆರ್ಥಿಕ ವ್ಯವಸ್ಥೆಗೆ ಹೊಸ ಮಂತ್ರವಾಗಿದೆ.- ಇತ್ತೀಚಿನ ದಿನಗಳಲ್ಲಿ ಅನಿಯಮಿತ ಉದ್ಯೋಗಾವಕಾಶಗಳಿವೆ. ಇದು ನಮ್ಮ ಸುವರ್ಣ ಯುಗ.- "ಬಾಹ್ಯಾಕಾಶ ಕ್ಷೇತ್ರವು ಅಸಂಖ್ಯಾತ ಸುಧಾರಣೆಗಳನ್ನು ಕಂಡಿದೆ.- "ಕಳೆದ 10 ವರ್ಷಗಳಲ್ಲಿ 10 ಕೋಟಿ ಮಹಿಳೆಯರು ಮಹಿಳಾ ಸ್ವಸಹಾಯ ಸಂಘಗಳಿಗೆ ಸೇರ್ಪಡೆಯಾಗಿದ್ದಾರೆ. 10 ಕೋಟಿ ಮಹಿಳೆಯರು ಆರ್ಥಿಕವಾಗಿ ಸ್ವತಂತ್ರರಾಗುತ್ತಿದ್ದಾರೆ.- ಬಡವರು, ಮಧ್ಯಮ ವರ್ಗದವರು, ವಂಚಿತರು ನಮ್ಮ ಯುವಕರ ಆಕಾಂಕ್ಷೆಗಳಿಗಾಗಿ, ಅವರ ಜೀವನದಲ್ಲಿ ಸುಧಾರಣೆಗಳನ್ನು ತರಲು ನಾವು ಸುಧಾರಣಾ ಮಾರ್ಗವನ್ನು ಕೈಗೆತ್ತಿಕೊಂಡಿದ್ದೇವೆ.- "ಪ್ರವಾಸೋದ್ಯಮ, ಎಂಎಸ್‌ಎಂಇ, ಶಿಕ್ಷಣ, ಆರೋಗ್ಯ, ಸಾರಿಗೆ, ಕೃಷಿ ಅಥವಾ ಇತರ ಯಾವುದೇ ಕ್ಷೇತ್ರವಾಗಿರಲಿ ಎಲ್ಲಾ ಕ್ಷೇತ್ರಗಳಲ್ಲಿ ಸುಧಾರಿತ ತಂತ್ರಜ್ಞಾನ ವ್ಯವಸ್ಥೆ ಇದೆ.- “ಬಾಹ್ಯಾಕಾಶ ಕ್ಷೇತ್ರದಲ್ಲಿ ನೂರಾರು ಸ್ಟಾರ್ಟ್ ಅಪ್ ಗಳು ಬಂದಿವೆ. ಖಾಸಗಿ ಉಪಗ್ರಹಗಳು ಮತ್ತು ರಾಕೆಟ್‌ಗಳನ್ನು ಉಡಾವಣೆ ಮಾಡಲಾಗುತ್ತಿದೆ.- ಜಾಗತಿಕ ಸಂಸ್ಥೆಗಳಿಗೆ ಭಾರತದ ಮೇಲೆ ಅತೀವ ಭರವಸೆ ಇದೆ, ರಫ್ತು, ವಿದೇಶಿ ವಿನಿಮಯ ಪ್ರಮಾಣ ಹೆಚ್ಚಾಗಿದೆ.- ಮೆಡಿಕಲ್ ಸೀಟ್‌ಗಳ ಸಂಖ್ಯೆಯನ್ನು 1ಲಕ್ಷಕ್ಕೆ ಏರಿಕೆ ಮಾಡಲಾಗಿದೆ.-"ರಕ್ಷಣೆ ವಿಚಾರದಲ್ಲಿ ಭಾರತ ಆತ್ಮ ನಿರ್ಭರವಾಗಿದೆ.