* 2022 ರಿಂದ ಪ್ರತಿ ವರ್ಷ ಡಿಸೆಂಬರ್ 26 ರಂದು ‘ವೀರ್ ಬಾಲ್ ದಿವಸ್ ಅನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಹತ್ತನೇ ಸಿಖ್ ಗುರು ಗೋಬಿಂದ್ ಸಿಂಗ್ ಅವರ ನಾಲ್ವರು ಪುತ್ರರ ಸ್ಮರಣಾರ್ಥವಾಗಿ ‘ವೀರ್ ಬಾಲ್ ದಿವಸ್’ ಆಚರಿಸಿಕೊಂಡು ಬರಲಾಗುತ್ತಿದೆ. * ಮೊಘಲರ ಆಳ್ವಿಕೆಯಲ್ಲಿ ಪಂಜಾಬಿನಲ್ಲಿ ಸಿಖ್ಖರ ನಾಯಕರಾಗಿದ್ದ ಗುರು ಗೋಬಿಂದ್ ಸಿಂಗ್ ಅವರು 1699 ರಲ್ಲಿ ಖಾಲ್ಸಾ ಪಂಥವನ್ನು ಸ್ಥಾಪಿಸಿದರು. ಸಿಖ್ ಸಮುದಾಯದ ಜನರನ್ನು ಧಾರ್ಮಿಕ ಕಿರುಕುಳದಿಂದ ರಕ್ಷಿಸುವ ಉದ್ದೇಶವನ್ನು ಈ ಪಂಥವು ಹೊಂದಿತ್ತು. ಗುರು ಗೋಬಿಂದ್ ಸಿಖ್ ಅವರಿಗೆ ನಾಲ್ಕು ಗಂಡು ಮಕ್ಕಳಾದ ಅಜಿತ್, ಜುಝಾರ್, ಜೋರಾವರ್ ಮತ್ತು ಫತೇಹ್, ಅವರೆಲ್ಲರೂ ಖಾಲ್ಸಾದ ಭಾಗವಾಗಿದ್ದರು. ಅವರನ್ನು ಚಾರ್ ಸಾಹಿಬ್ಜಾದೆ ಖಾಲ್ಸಾ ಎಂದು ಕರೆಯಲಾಗುತ್ತಿತ್ತು.* ಸಣ್ಣ ವಯಸ್ಸಿನಲ್ಲಿಯೇ ಆ ನಾಲ್ವರು ಮಕ್ಕಳ ಮೊಘಲ್ ಸೇನೆಯಿಂದ ಬಲಿಯಾದರು. ಹೀಗಾಗಿ 2022 ರ ಜನವರಿ 9 ರಂದು, ಗುರು ಗೋಬಿಂದ್ ಸಿಂಗ್ ಅವರ ಜನ್ಮದಿನದಂದು, ಡಿಸೆಂಬರ್ 26 ರಂದು ಸಿಖ್ ಗುರುಗಳ ಮಕ್ಕಳಾದ ಜೋರಾವರ್ ಸಿಂಗ್ ಮತ್ತು ಫತೇಹ್ ಸಿಂಗ್ ಅವರ ಹುತಾತ್ಮ ದಿನದ ಗೌರವಾರ್ಥವಾಗಿ ‘ವೀರ್ ಬಾಲ್ ದಿವಸ್’ ಎಂದು ಆಚರಿಸಲಾಗುವುದು ಎಂದು ಪ್ರಧಾನಿ ಮೋದಿ ಘೋಷಿಸಿದ್ದರು. ಅಂದಿನಿಂದ ವೀರ್ ಬಾಲ್ ದಿವಸ್ ಅನ್ನು ಆಚರಿಸಿಕೊಂಡು ಬರಲಾಗುತ್ತಿದೆ.* ನವದೆಹಲಿಯ ಭಾರತ್ ಮಂಟಪದಲ್ಲಿ ಮಧ್ಯಾಹ್ನ 12 ಗಂಟೆಗೆ ಭಾರತದ ಭವಿಷ್ಯದ ಅಡಿಪಾಯ ಎಂದು ಮಕ್ಕಳನ್ನು ಗೌರವಿಸುವ ರಾಷ್ಟ್ರವ್ಯಾಪಿ ಆಚರಣೆಯಾದ ವೀರ್ ಬಾಲ್ ದಿವಸ್ ಕಾರ್ಯಕ್ರಮವು ನಡೆಯಲಿದೆ. ಗಮನಾರ್ಹ ಸಾಧನೆಗಳನ್ನು ಮಾಡಿದ ಒಟ್ಟು 17 ಮಕ್ಕಳಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ್ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ.