* ನರಸಿಪಟ್ಟಣಂ ಶಾಸಕ ಸಿ.ಅಯ್ಯನ್ನಪತ್ರುಡು ಅವರು ಆಂಧ್ರ ಪ್ರದೇಶ ವಿಧಾನಸಭೆಯ ಸಭಾಧ್ಯಕ್ಷರಾಗಿ ಜೂನ್ 22 ರಂದು (ಶನಿವಾರ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ.* ಬೇರೆ ಯಾವ ಶಾಸಕರೂ ಸಭಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರಲಿಲ್ಲ. ಹೀಗಾಗಿ ತೆಲುಗು ದೇಶಂ ಪಕ್ಷದ (ಟಿಡಿಪಿ) ಪತ್ರುಡು ಆಯ್ಕೆ ಔಪಚಾರಿಕವಾಗಿ ನಡೆಯಿತು ಎಂದು ವಿಧಾನಸಭೆಯ ಪ್ರಧಾನ ಕಾರ್ಯದರ್ಶಿ ಪಿಪಿಕೆ ರಾಮಾಚಾರ್ಯುಲು ಅವರು ತಿಳಿಸಿದ್ದಾರೆ.