Job Description: * ಭಾರತೀಯ ಸಶಸ್ತ್ರ ಪಡೆಗಳು ಮೇ 07 ರಂದು (ಬುಧವಾರ) 'ಆಪರೇಷನ್ ಸಿಂಧೂರ್' ಅನ್ನು ಪ್ರಾರಂಭಿಸಿದವು, ಇದು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರ (ಪಿಒಜೆಕೆ) ದಲ್ಲಿರುವ ಭಯೋತ್ಪಾದಕ ಶಿಬಿರಗಳ ಮೇಲೆ ನಿಖರವಾದ ದಾಳಿಯ ಸರಣಿಯಾಗಿದೆ. * 26 ಭಾರತೀಯ ನಾಗರಿಕರು ಮತ್ತು ಭದ್ರತಾ ಸಿಬ್ಬಂದಿಯ ಜೀವವನ್ನು ಬಲಿ ಪಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಎರಡು ವಾರಗಳ ನಂತರ ಈ ಕಾರ್ಯಾಚರಣೆ ನಡೆಯಿತು, ಇದು ಭಾರತದ ರಕ್ಷಣಾ ಸ್ಥಾಪನೆಯಿಂದ ಕಾರ್ಯತಂತ್ರದ ಮತ್ತು ತ್ವರಿತ ಪ್ರತಿಕ್ರಿಯೆಯನ್ನು ಉಂಟುಮಾಡಿತು.* ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯು ಉಗ್ರರ ಚಟುವಟಿಕೆಯ ಕೇಂದ್ರಗಳಾಗಿದ್ದ ಕೋಟ್ಲಿ, ಮುರಿಡ್ಕೆ ಮತ್ತು ಬಹವಾಲ್ಪುರ ಸೇರಿದಂತೆ ಒಂಬತ್ತು ಸ್ಥಳಗಳ ಮೇಲೆ ದಾಳಿ ನಡೆಸಿದ್ದು, ಇದರಿಂದ ವ್ಯಾಪಕ ಹಾನಿಯಾಗಿದೆ ಎಂದು ಪಾಕಿಸ್ತಾನ ಅಧಿಕೃತವಾಗಿ ಒಪ್ಪಿಕೊಂಡಿದೆ.* ಗಡಿಯಾಚೆಗಿನ ಒಳನುಸುಳುವಿಕೆ ಮತ್ತು ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳ ಬೆಂಬಲದಿಂದಾಗಿ ಪಹಲ್ಗಾಮ್‌ನಲ್ಲಿ ನಡೆದ ಕ್ರೂರ ಭಯೋತ್ಪಾದಕ ದಾಳಿಯು ರಾಷ್ಟ್ರವ್ಯಾಪಿ ಆಕ್ರೋಶಕ್ಕೆ ಕಾರಣವಾಯಿತು. ಇದಕ್ಕೆ ಪ್ರತಿಕ್ರಿಯೆಯಾಗಿ ಭಾರತ ಸರ್ಕಾರವು "ಆಪರೇಷನ್ ಸಿಂಧೂರ್" ಎಂಬ ಕೋಡ್ ಹೆಸರಿನಲ್ಲಿ ಸೇನೆ, ನೌಕಾಪಡೆ ಮತ್ತು ವಾಯುಪಡೆಯನ್ನು ಒಳಗೊಂಡ ತ್ರಿ-ಸೇವಾ ಮಿಲಿಟರಿ ದಾಳಿಗೆ ಹಸಿರು ನಿಶಾನೆ ತೋರಿಸಿತು.* ಹಿಂದೂ ಮಹಿಳೆಯರು ಮದುವೆಯಾದ ಬಳಿಕ ಸುಮಂಗಲಿಯ ಸಂಕೇತವಾಗಿ ಹಣೆಯ ಮೇಲೆ ಸಿಂಧೂರ (ಕೆಂಪು ಕಂಕುಮ)ವನ್ನು ಇಟ್ಟುಕೊಳ್ಳುತ್ತಾರೆ. ಪಹಲ್ಗಾಮ್‌ನಲ್ಲಿ ಉಗ್ರರು ಗುಂಡು ಹಾರಿಸುವ ಮೊದಲು ಹೆಸರು, ಧರ್ಮವನ್ನು ಕೇಳಿದ್ದಾರೆ. ಹಿಂದೂ ಎಂದ ತಕ್ಷಣ ಗುಂಡು ಹಾರಿಸಿದ್ದಾರೆ ಎಂದು ಮೃತರ ಸಂಬಂಧಿಗಳು ಹೇಳಿದ್ದರು. * ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಾದ್ಯಂತ ಉಗ್ರ ಸಂಘಟನೆಗಳ ಒಂಬತ್ತು ಶಿಬಿರಗಳನ್ನು ಗುರಿಯಾಗಿಸಿಕೊಂಡು ಭಾರತೀಯ ಸೇನೆ ‘ಆಪರೇಷನ್ ಸಿಂಧೂರ’ ಎಂಬ ಸೇನಾ ಕಾರ್ಯಾಚರಣೆಯನ್ನು ನಡೆಸಿದೆ.* ದಾಳಿಯ ಬೆನ್ನಲ್ಲೇ ಕಾಶ್ಮೀರದ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಉದ್ದಕ್ಕೂ ಉದ್ವಿಗ್ನತೆ ಹೆಚ್ಚಿರುವ ಪರಿಣಾಮ ಭಾರತೀಯ ವಾಯುಪಡೆಯು (ಐಎಎಫ್) ಶ್ರೀನಗರ ವಿಮಾನ ನಿಲ್ದಾಣವನ್ನು ನಿಯಂತ್ರಣಕ್ಕೆ ಪಡೆದಿದೆ.* ಜಮ್ಮು ಮತ್ತು ಕಾಶ್ಮೀರ, ಅಮೃತಸರ, ಚಂಡಿಗಢ, ಧರ್ಮಶಾಲಾ, ಲೇಹ್‌ನ ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆ ಸ್ಥಗಿತಗೊಂಡಿದ್ದು, ವಿಮಾನಯಾನ ಸಂಸ್ಥೆಗಳು ವಿಮಾನಗಳ ಹಾರಾಟವನ್ನು ರದ್ದುಗೊಳಿಸಿವೆ ಎಂದು ತಿಳಿದುಬಂದಿದೆ.