* ಮಧ್ಯಂತರ ವ್ಯಾಪ್ತಿಯ ಬ್ಯಾಲಿಸ್ಟಿಕ್‌ ಕ್ಷಿಪಣಿ 'ಅಗ್ನಿ–1' ಉಡಾವಣೆಯನ್ನು ಒಡಿಶಾ ಕರಾವಳಿಯ ಎ. ಪಿ. ಜೆ ಅಬ್ದುಲ್‌ ಕಲಾಂ ದ್ವೀಪದಿಂದ ಸ್ಟ್ರಾಟೆಜಿಕ್ ಫೋರ್ಸ್ ಕಮಾಂಡ್ ಜೂನ್ 1 ರಂದು (ಗುರುವಾರ) ಯಶಸ್ವಿಯಾಗಿ ನೆರವೇರಿಸಲಾಯಿತು ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.* “ಕ್ಷಿಪಣಿಯು ಸಾಬೀತಾಗಿರುವ ವ್ಯವಸ್ಥೆಯಾಗಿದ್ದು, ಅತ್ಯಂತ ಹೆಚ್ಚಿನ ನಿಖರತೆಯೊಂದಿಗೆ ಗುರಿಗಳನ್ನು ಹೊಡೆಯುವ ಸಾಮರ್ಥ್ಯವನ್ನು ಹೊಂದಿದ್ದು,ಬಳಕೆದಾರರ ತರಬೇತಿ ಉಡಾವಣೆಯು ಕ್ಷಿಪಣಿಯ ಎಲ್ಲಾ ಕಾರ್ಯಾಚರಣೆ ಮತ್ತು ತಾಂತ್ರಿಕ ನಿಯಮಗಳನ್ನು ಯಶಸ್ವಿಯಾಗಿ ಮೌಲ್ಯೀಕರಿಸಿದೆ ಎಂದು ರಕ್ಷಣಾ ಸಚಿವಾಲಯವು ಹೇಳಿಕೆ ತಿಳಿಸಿದೆ.