* ಅನ್ನಭಾಗ್ಯ ಯೋಜನೆಯನ್ನು ಪ್ರಶಂಸಿಸುತ್ತ 'ಅನ್ನ ಸುವಿಧಾ ಯೋಜನೆ' ಎಂಬ ಹೊಸ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರುವರಿ 16 ರಂದು ಬಜೆಟ್ ನಲ್ಲಿ ಘೋಷಣೆ ಮಾಡಿದರು. * ಅನ್ನ ಸುವಿಧಾ ಎಂಬ ಹೊಸ ಯೋಜನೆಯು ಹೋಮ್ ಡೆಲಿವರಿ ಆಪ್‌ ಮೂಲಕ 80 ವರ್ಷದ ಹಿರಿಯ ನಾಗರಿಕರು ಮಾತ್ರ ಇರುವ ಮನೆಯ ಬಾಗಿಲಿಗೆ ಆಹಾರ ಧಾನ್ಯಗಳನ್ನು ತಲುಪಿಸುವ ವ್ಯವಸ್ಥೆಯಾಗಿದೆ.* ರಾಜ್ಯದ ಅಂದಾಜು 80,000 ಫಲಾನುಭವಿಗಳಿಗೆ ಇದರಿಂದ ಅನುಕೂಲವಾಗುತ್ತದೆ.* ಅನ್ನಭಾಗ್ಯ ಯೋಜನೆಯಡಿ 2024ರ ಜನವರಿ ಅಂತ್ಯದ ವರೆಗೆ 4.02 ಕೋಟಿ ಫಲಾನುಭವಿಗಳಿಗೆ 4,595 ಕೋಟಿ ರೂ. ವರ್ಗಾವಣೆ ಮಾಡಲಾಗಿದೆ ಎಂದೂ ಸಿಎಂ ಬಜೆಟ್ನಲ್ಲಿ ತಿಳಿಸಿದರು.* ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಕುರಿತಾದ ವಿವರ ನೀಡುತ್ತ, ಹಸಿವು ಮುಕ್ತ ಕರ್ನಾಟಕ ನಿರ್ಮಾಣದ ಕನಸಿನೊಂದಿಗೆ ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಉಚಿತ ಅಕ್ಕಿ ವಿತರಿಸುವ ಅನ್ನಭಾಗ್ಯ ಯೋಜನೆ ಜಾರಿಗೆ ತರಲಾಗಿತ್ತು.