* ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ 'ಬೆಂಗಳೂರು ಟೆಕ್ ಶೃಂಗಸಭೆ-2024'ರ 27ನೇ ಆವೃತ್ತಿಯನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅತ್ಯಾಧುನಿಕ ಸಂಶೋಧನೆ ಮತ್ತು ಅಭಿವೃದ್ಧಿಯನ್ನು ಉತ್ತೇಜಿಸಲು ಬೆಂಗಳೂರಿನಲ್ಲಿ ಎಐ ಉತ್ಕೃಷ್ಟತಾ ಕೇಂದ್ರವನ್ನು ಸ್ಥಾಪಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.* ಇದನ್ನು ಐಐಟಿ ಅಲುಮ್ಮಿ ಸೆಂಟರ್ ಬೆಂಗಳೂರು (ITACB) ಸಹಭಾಗಿತ್ವದಲ್ಲಿ ಮುನ್ನಡೆಸಲಾಗುತ್ತಿದೆ. ಉತ್ಕೃಷ್ಟತಾ ಕೇಂದ್ರ ಬಂಡವಾಳ, ಗುಣಮಟ್ಟದ ಮಾರ್ಗದರ್ಶನ. ಉದ್ಯಮ ಪಾಲುದಾರಿಕೆಗಳು ಮತ್ತು ಅತ್ಯಾಧುನಿಕ ತಾಂತ್ರಿಕ ಸಂಪನ್ಮೂಲಗಳಿಗೆ ಪ್ರವೇಶ ಒದಗಿಸುವ ಮೂಲಕ ಎಐ-ಚಾಲಿತ ಆವಿಷ್ಕಾರಗಳನ್ನು ಬೆಂಬಲಿಸಲಿದೆ.* ಇದೆ ವೇಳೆ ಜಿಸಿಸಿ ನೀತಿಯನ್ನು ಅನಾವರಣಗೊಳಿಸಿದರು. ನಿಪುಣ್‌- ಕರ್ನಾಟಕ ಯೋಜನೆಯಡಿಯಲ್ಲಿ ಕೈಗಾರಿಕೆಗಳಲ್ಲಿ ಕಾರ್ಯನಿರ್ವಹಿಸಲು ಸಿದ್ಧರಿರುವ ಕಾರ್ಮಿಕಪಡೆಯನ್ನು ತಯಾರು ಮಾಡಲು ಹಲವು ಯೋಜನೆಗಳನ್ನು ಕೈಗೊಳ್ಳಲಾಗಿದೆ.* ಮೈಕ್ರೋಸಾಫ್ಟ್, ಇಂಟೆಲ್, ಆಕ್ಸೆಂಚರ್, ಐಬಿಎಂ ಮತ್ತು ಬಿಎಫ್‌ಎಸ್ ಒಕ್ಕೂಟದ ಜತೆಗೆ ಸಹಿ ಹಾಕಲಾದ ಐದು ಒಪ್ಪಂದಗಳು ರಾಜ್ಯದಲ್ಲಿನ ಒಂದು ಲಕ್ಷ ವ್ಯಕ್ತಿಗಳನ್ನು ಕೌಶಲಯುಕ್ತಗೊಳಿಸಲಿವೆ ಎಂದು ಹೇಳಿದರು.* ಬೆಂಗಳೂರು,ಮೈಸೂರು ಹಾಗೂ ಬೆಳಗಾವಿಯಲ್ಲಿ ಮೂರು ಜಾಗತಿಕ ನಾವಿನ್ಯತಾ ಪಾರ್ಕ್‌ಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.* ಭಾರತದ ಮೊದಲ ಗ್ಲೋಬಲ್ ಕೆಪೆಬಬಲಿಟಿ ಸೆಂಟರ್ (ಜಿಸಿಸಿ) ನೀತಿಯನ್ನು ಕರ್ನಾಟಕ ಜಾರಿಗೆ ತಂದಿದ್ದು, ಈ ಕೇಂದ್ರಗಳನ್ನು ಸಶಕ್ತಗೊಳಿಸಲು ಹಾಗೂ ಬೆಂಬಲಿಸಲು ಉದ್ದೇಶಿಸಿದೆ.* ಇದರ ಮುಂದುವರೆದ ಭಾಗವಾಗಿ ಬೆಂಗಳೂರು,ಮೈಸೂರು ಹಾಗೂ ಬೆಳಗಾವಿಯಲ್ಲಿ ಮೂರು ನಾವಿನ್ಯತಾ ಪಾರ್ಕ್‌ಗಳನ್ನು ಸ್ಥಾಪಿಸಲಾಗುವುದು.