* ಭಾರತ - ಬಾಂಗ್ಲಾದೇಶ ಗಡಿಯಲ್ಲಿನ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಕೇಂದ್ರ ಸರ್ಕಾರ ಸಮಿತಿ ರಚಿಸಿದೆ ಎಂದು ಆಗಸ್ಟ್ 8 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೇಳಿದ್ದಾರೆ..* ನೆರೆರಾಷ್ಟ್ರ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ನಾಗರಿಕ ದಂಗೆಯ ಹಿನ್ನೆಲೆಯಲ್ಲಿ ಇಂಡೋ-ಬಾಂಗ್ಲಾದೇಶದ ಗಡಿಯಲ್ಲಿ(ಐಬಿಬಿ) ಪ್ರಸ್ತುತ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಮೋದಿ ಸರ್ಕಾರವು ಸಮಿತಿ ರಚಿಸಿದೆ ಎಂದು ಕೇಂದ್ರ ಗೃಹ ಸಚಿವರು ತಿಳಿಸಿದ್ದಾರೆ.* ಈ ಸಮಿತಿಯು ಭಾರತೀಯ ಪ್ರಜೆಗಳು, ಹಿಂದೂಗಳು ಮತ್ತು ಅಲ್ಲಿ ವಾಸಿಸುವ ಇತರ ಅಲ್ಪಸಂಖ್ಯಾತ ಸಮುದಾಯಗಳ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಬಾಂಗ್ಲಾದೇಶದ ಅಧಿಕಾರಿಗಳೊಂದಿಗೆ ನಿಕಟ ಸಂಪರ್ಕ ಕೊಂಡಿಯಾಗಿ ಕಾರ್ಯ ನಿರ್ವಹಿಸುತ್ತದೆ. ಬಿಎಸ್‌ಎಫ್‌ನ ಪೂರ್ವ ಕಮಾಂಡ್‌ನ ಎಡಿಜಿ ನೇತೃತ್ವದಲ್ಲಿ ಈ ಸಮಿತಿ ರಚಿಸಲಾಗಿದೆ ಎಂದು ಅಮಿತ್ ಶಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.* ಸೌತ್ ಬೆಂಗಾಲ್ ಫ್ರಾಂಟಿಯರ್ ಐಜಿಪಿ, ತ್ರಿಪುರ ಫ್ರಾಂಟಿಯರ್‌ನ ಐಜಿಪಿ, ಲ್ಯಾಂಡ್ ಪೋರ್ಟ್ ಆಥಾರಿಟಿ ಆಫ್ ಇಂಡಿಯಾದ ಕಾರ್ಯದರ್ಶಿ ಹಾಗೂ ಸದಸ್ಯರು ಈ ಸಮಿತಿಯಲ್ಲಿರಲಿದ್ದಾರೆ ಎಂದು ತಿಳಿಸಿದ್ದಾರೆ.