* ಭಾರತ ಮತ್ತು ನೇಪಾಳದ ಸುಪ್ರೀಂ ಕೋರ್ಟ್ಗಳು ಸೋಮವಾರ(ಏಪ್ರಿಲ್ 07) ನ್ಯಾಯಾಂಗ ಸಹಕಾರ ಹಾಗೂ ಅಭಿವೃದ್ಧಿಗೆ ಸಂಬಂಧಿಸಿದ ಒಪ್ಪಂದವೊಂದಕ್ಕೆ ಸಹಿ ಹಾಕಿವೆ.* ಭಾರತ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಹಾಗೂ ನೇಪಾಳದ ಮುಖ್ಯ ನ್ಯಾಯಮೂರ್ತಿ ಪ್ರಕಾಶ್ ಮನ್ ಸಿಂಗ್ ರಾವುತ್ ಒಪ್ಪಂದಕ್ಕೆ ಸಹಿ ಹಾಕಿದರು.* ಭಾರತದ ಕಾನೂನು ಖಾತೆಯ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಈ ಸಂದರ್ಭ ಹಾಜರಿದ್ದರು.* ನ್ಯಾಯಾಂಗ ಸಹಕಾರ, ಪರಸ್ಪರ ಸಂಬಂಧ ವೃದ್ಧಿ, ಸಾಮರ್ಥ್ಯ ವೃದ್ಧಿ ಹಾಗೂ ತರಬೇತಿಗೆ ಸಂಬಂಧಿಸಿದಂತೆ ಈ ಒಪ್ಪಂದವು ಸಾಂಸ್ಥಿಕ ಚೌಕಟ್ಟನ್ನು ನೀಡಲಿದೆ ಎಂದು ಭಾರತ ರಾಯಭಾರ ಕಚೇರಿ ಮಾಹಿತಿ ನೀಡಿದೆ.