* ಭಾರತೀಯ ಸೇನಾ ನಿವೃತ್ತ ಮೇಜರ್ ಜನರಲ್ ಸಿ ಕೆ ಕರುಂಬಯ್ಯ(88) ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಮೈಸೂರಿನ ತಾಲೂಕಿನ ಹೆಮ್ಮನಹಳ್ಳಿಯ ಅವರ ತೋಟದ ಮನೆಯಲ್ಲಿ ಜನವರಿ 04 ರಂದು ನಿಧನರಾದರು. * ಮಡಿಕೇರಿಯಲ್ಲಿ 1936ರ ಡಿಸೆಂಬರ್.3ರಂದು ಡಾ.ಸಿ.ಬಿ.ಕಾರಿಯಪ್ಪ ಪುತ್ರರಾಗಿ ಜನಿಸಿದ ಅವರು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರಿಯಪ್ಪ ಅವರ ಹತ್ತಿರದ ಸಂಬಂಧಿ. ಮಡಿಕೇರಿಯ ಸೆಂಟ್ರಲ್ ಪ್ರೌಢಶಾಲೆ, ಸರ್ಕಾರಿ ಕಾಲೇಜಿನಲ್ಲಿ ಶಿಕ್ಷಣ ಪಡೆದು 1957ರಲ್ಲಿ ಡೆಹ್ರಾಡೂನ್ ನ ಭಾರತೀಯ ಮಿಲಿಟರಿ ಅಕಾಡೆಮಿಗೆ ಸೇರಿದರು.* ಮರಾಠ ಲಘು ಪದಾತಿದಳದ 5ನೇ ಬೆಟಾಲಿಯನ್ ನಲ್ಲಿ ಸೇನಾ ಸೇವೆ ಆರಂಭಿಸಿದರು. ಮಿಜೋರಾಂ, ನಾಗಾಲ್ಯಾಂಡ್, ತ್ರಿಪುರಾದ ಸೇನೆ ಕಾರ್ಯಾಚರಣೆಗಳಲ್ಲಿ ಭಾಗವಹಿಸಿದ್ದರು. 1965ರ ಭಾರತ ಪಾಕಿಸ್ತಾನ ಯುದ್ಧದಲ್ಲಿ ರಾಜಸ್ಥಾನ ಗಡಿಯಲ್ಲಿ ಹೋರಾಟ ನಡೆಸಿ ಪಾಕ್ ನ ಹಲವು ಗ್ರಾಮಗಳನ್ನು ವಶಪಡಿಸಿಕೊಂಡಿದ್ದರು.* 1971ರ ಬಾಂಗ್ಲಾ ವಿಮೋಚನಾ ಯುದ್ಧದಲ್ಲಿ ಸಾವಿರಾರು ಪಾಕ್ ಯೋಧರ ಶರಣಾಗತಿಗೆ ಕಾರಣರಾಗಿದ್ದರು. ಅಲ್ಲದೇ ಮಗುರಾದಲ್ಲಿ ಶಸ್ತ್ರಾಸ್ತ್ರ ಸಾಗಿಸುತ್ತಿದ್ದ ಪಾಕಿಸ್ತಾನದ 300 ಟ್ರಕ್ ಗಳನ್ನು ವಶಕ್ಕೆ ಪಡೆದಿದ್ದರು. ಅವರು ಮುನ್ನಡೆಸಿದ್ದ ಪಡೆಗೆ ರಾಷ್ಟ್ರಪತಿ ಗೌರವ ದೊರೆತಿತ್ತು. ಕರುಂಬಯ್ಯ ಅವರಿಗೆ ಸೇನಾ ಪದಕವೂ ಸಿಕ್ಕಿತ್ತು.* ಲಡಾಖ್ ನಲ್ಲಿ 121 ಇನ್ ಫ್ಯಾನ್ಸಿ ಬ್ರಿಗೇಡ್ ಗ್ರೂಪ್ ಮುನ್ನಡೆಸಿದ್ದ ಕರುಂಬಯ್ಯ ಅವರು ಹೆಚ್ಚುವರಿ ಮಿಲಿಟರಿ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದರು. 35 ವರ್ಷ ಭಾರತೀಯ ಸೇನೆಯ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿ 1991 ಡಿಸೆಂಬರ್ 31 ರಂದು ನಿವೃತ್ತರಾಗಿದ್ದರು.