Loading..!
KPSC Vaani
Login
My Orders
My Cart
Shorts
Job news
Current Affairs
Buy books
Practice Papers
Quizzes
Question Papers
Institutes
Flash news
Cut Offs
Blogs
Study Materials
Contact Us
About Us
More
Study Materials
Cut Offs
Blogs
Contact Us
Upload file
About Us
Login
Register
×
Warning!
Enter minimum 2 characters.
Back
ಪ್ರಚಲಿತ ಘಟನೆಗಳು
ಭತ್ತ ಸಂಶೋಧನೆಗೆ ಫಿಲಿಪೈನ್ಸ್–ಮಂಡ್ಯ ಕೃಷಿ ವಿವಿ ಜಂಟಿ ಸಹಭಾಗಿತ್ವ
16 ಅಕ್ಟೋಬರ್ 2025
* ರಾಜ್ಯದಲ್ಲಿ ಭತ್ತದ ತಳಿಗಳ ಆಧುನಿಕ ಸಂಶೋಧನೆ ಮತ್ತು ಸಂವರ್ಧನೆಗೆ ನೆರವಾಗುವ ಕುರಿತು ಫಿಲಿಪೈನ್ಸನ ಅಂತರ ರಾಷ್ಟ್ರೀಯ ಭತ್ತ ಸಂಶೋಧನಾ ಕೇಂದ್ರದೊಂದಿಗೆ ಮಂಡ್ಯ ಕೃಷಿ ವಿಶ್ವವಿದ್ಯಾಲಯ ಮಹತ್ವದ ಒಡಂಬಡಿಕೆ ಮಾಡಿಕೊಂಡಿದೆ.
* ಫಿಲಿಪೈನ್ಸನ ಮನಿಲಾದಲ್ಲಿರುವ ಅಂತರರಾಷ್ಟ್ರೀಯ ಭತ್ತ ಸಂಶೋಧನಾ ಕೇಂದ್ರಕ್ಕೆ ಉನ್ನತ ಮಟ್ಟದ ನಿಯೋಗದೊಂದಿಗೆ ತೆರಳಿರುವ ಕೃಷಿ ಸಚಿವ ಏನ್.ಚೆಲುವರಾಯ ಸ್ವಾಮಿ ಒಪ್ಪದಂಕ್ಕೆ ಸಹಿ ಹಾಕಿದರು.
*ಭತ್ತದ ತಳಿಗಳ ಸಂರಕ್ಷಣೆ,ಸಂಶೋಧನೆ ಕರ್ನಾಟಕ ಸರ್ಕಾರ ತೋರುತ್ತಿರುವ ಕಾಳಜಿ ಮತ್ತು ರೈತರ ಪರ ಯೋಜನೆಗಳ ಬಗ್ಗೆ ಫಿಲಿಪೈನ್ಸನ್ ಅಂತರರಾಷ್ಟ್ರೀಯ ಭತ್ತ ಸಂಶೋಧನಾ ಕೇಂದ್ರದದ ಅಧಿಕಾರಿಗಳು ಮೆಚ್ಚುಗೆಯನ್ನು ಸೂಚಿಸಿದರು.
* 1945 ರಿಂದಲೂ ಭಾರತ ಮತ್ತು ಫಿಲಿಪೈನ್ಸನ್ ನಡುವೆ ಇರುವ ಭಾಂದವ್ಯದ ಕೃಷಿ ಕ್ಷೇತ್ರದ ಸಹಕಾರಗಳನ್ನು ಸಹ ಸ್ಮರಿಸಿ,ಶ್ಲಾಘಿಸಲಾಯಿತು.ಅಂತಾರಾಷ್ಟ್ರೀಯ ಭತ್ತದ ಸಂಶೋಧನಾ ಕೇಂದ್ರದ ಉಪ ಮಹಾ ನಿರ್ದೇಶಕರಾಗಿ ಜುನೇಲ ಸಯಾನೊ ಉಪಸ್ಥಿತಿಯಲ್ಲಿದ್ದಾರೆ.
* ಈ ಒಡಂಬಡಿಕೆಯು ರಾಜ್ಯದಲ್ಲಿ ನೆರೆ,ಬರ,ಕರಾವಳಿ,ಮಲೆನಾಡು,ಬಯಲುಸೀಮೆ ಮುಂತಾದ ವಿಭಿನ್ನ ಪರಿಸ್ಥಿತಿಗೆ ಹೊಂದಿಕೊಳ್ಳುವ ಭತ್ತದ ತಳಿಗಳನ್ನು ಅಭಿವೃದ್ಧಿಪಡಿಸಲು ಸಹಕಾರಿಯಾದಾಗಲಿದೆ.
* ಕರ್ನಾಕಟದಲ್ಲಿಯೂ ಅಂತರರಾಷ್ಟ್ರೀಯ ಮಟ್ಟದ ಭತ್ತ ಸಂಶೋಧನಾ ಕೇಂದ್ರ ಸ್ಥಾಪನೆ ಬಗ್ಗೆಯೂ ಸಚಿವರು ಸಮಾಲೋಚನೆ ನಡೆಸಿದ್ದಾರೆ.
* ಫಿಲಿಪೈನ್ಸನ್ ಸಂಸ್ಥೆ ಜೊತೆಗೆ ಮಂಡ್ಯ ಕೃಷಿ ವಿಶ್ವ ವಿದ್ಯಾಲಯ ಒಪ್ಪಂದದ ಸಹಿ ಹಾಕಿ ವಿನಿಮಯ ಮಾಡಿಕೊಂಡರು.
* ಕೃಷಿ ಸಚಿವರಾದ ಎನ.ಚೆಲುವರಾಯ ಸ್ವಾಮಿ ಅವರು ಅಧಿಕಾರಿಗಳ ತಂಡದೊಂದಿಗೆ ಅಂತರರಾಷ್ಟ್ರೀಯ ಭತ್ತದ ಸಂಶೋಧನಾ ಕೇಂದ್ರದ ಜಿನ ಬ್ಯಾಂಕ್ ಒಳಗೊಂಡಂತೆ ವಿವಿಧ ಪ್ರಯೋಗಾಲಯಗಳಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.
* ವಿವಿಧ ಜೈವಿಕ ಮತ್ತು ಅಜೈವಿಕ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದು,ಪೌಷ್ಠಕಾಂಶವುಳ್ಳ ಅಧಿಕ ಇಳುವರಿಯ ತರುವ ಬೇಸಾಯ ಕ್ರಮಗಳು ಮತ್ತು ಭತ್ತದ ಸಂಶೋಧನೆಗೆ ಈ ಒಡಂಬಡಿಕೆ ನೆರವಾಗಲಿದೆ ಎಂದು ಕೃಷಿ ಇಲಾಖೆ ಪ್ರಕಟಣೆ ತಿಳಿಸಿದೆ.
* ಭತ್ತದ ಮಹತ್ವ,ಉಭಯ ದೇಶಗಳು ಅನುಸರಿಸುತ್ತಿರುವ ಬೇಸಾಯ ಕ್ರಮಗಳು,ಮೌಲ್ಯ ವರ್ಧನೆಗೆ ಅನುಸರಿಸಬೇಕಾದ ಮಾರ್ಗೋಪಾಯಗಳ ಬಗ್ಗೆ ಮಾಹಿತಿ ಹಾಗು ಅನುಭವಗಳನ್ನು ವಿನಿಮಯ ಮಾಡಿಕೊಳ್ಳಲಾಯಿತು.
Take Quiz
Loading...