* ರಾಜ್ಯದಲ್ಲಿ ಭತ್ತದ ತಳಿಗಳ ಆಧುನಿಕ ಸಂಶೋಧನೆ ಮತ್ತು ಸಂವರ್ಧನೆಗೆ ನೆರವಾಗುವ ಕುರಿತು ಫಿಲಿಪೈನ್ಸನ ಅಂತರ ರಾಷ್ಟ್ರೀಯ ಭತ್ತ ಸಂಶೋಧನಾ ಕೇಂದ್ರದೊಂದಿಗೆ ಮಂಡ್ಯ ಕೃಷಿ ವಿಶ್ವವಿದ್ಯಾಲಯ ಮಹತ್ವದ ಒಡಂಬಡಿಕೆ ಮಾಡಿಕೊಂಡಿದೆ.* ಫಿಲಿಪೈನ್ಸನ ಮನಿಲಾದಲ್ಲಿರುವ ಅಂತರರಾಷ್ಟ್ರೀಯ ಭತ್ತ ಸಂಶೋಧನಾ ಕೇಂದ್ರಕ್ಕೆ ಉನ್ನತ ಮಟ್ಟದ ನಿಯೋಗದೊಂದಿಗೆ ತೆರಳಿರುವ ಕೃಷಿ ಸಚಿವ ಏನ್.ಚೆಲುವರಾಯ ಸ್ವಾಮಿ ಒಪ್ಪದಂಕ್ಕೆ ಸಹಿ ಹಾಕಿದರು.*ಭತ್ತದ ತಳಿಗಳ ಸಂರಕ್ಷಣೆ,ಸಂಶೋಧನೆ ಕರ್ನಾಟಕ ಸರ್ಕಾರ ತೋರುತ್ತಿರುವ ಕಾಳಜಿ ಮತ್ತು ರೈತರ ಪರ ಯೋಜನೆಗಳ ಬಗ್ಗೆ ಫಿಲಿಪೈನ್ಸನ್ ಅಂತರರಾಷ್ಟ್ರೀಯ ಭತ್ತ ಸಂಶೋಧನಾ ಕೇಂದ್ರದದ ಅಧಿಕಾರಿಗಳು ಮೆಚ್ಚುಗೆಯನ್ನು ಸೂಚಿಸಿದರು.* 1945 ರಿಂದಲೂ ಭಾರತ ಮತ್ತು ಫಿಲಿಪೈನ್ಸನ್ ನಡುವೆ ಇರುವ ಭಾಂದವ್ಯದ ಕೃಷಿ ಕ್ಷೇತ್ರದ ಸಹಕಾರಗಳನ್ನು ಸಹ ಸ್ಮರಿಸಿ,ಶ್ಲಾಘಿಸಲಾಯಿತು.ಅಂತಾರಾಷ್ಟ್ರೀಯ ಭತ್ತದ ಸಂಶೋಧನಾ ಕೇಂದ್ರದ ಉಪ ಮಹಾ ನಿರ್ದೇಶಕರಾಗಿ ಜುನೇಲ ಸಯಾನೊ ಉಪಸ್ಥಿತಿಯಲ್ಲಿದ್ದಾರೆ.* ಈ ಒಡಂಬಡಿಕೆಯು ರಾಜ್ಯದಲ್ಲಿ ನೆರೆ,ಬರ,ಕರಾವಳಿ,ಮಲೆನಾಡು,ಬಯಲುಸೀಮೆ ಮುಂತಾದ ವಿಭಿನ್ನ ಪರಿಸ್ಥಿತಿಗೆ ಹೊಂದಿಕೊಳ್ಳುವ ಭತ್ತದ ತಳಿಗಳನ್ನು ಅಭಿವೃದ್ಧಿಪಡಿಸಲು ಸಹಕಾರಿಯಾದಾಗಲಿದೆ.* ಕರ್ನಾಕಟದಲ್ಲಿಯೂ ಅಂತರರಾಷ್ಟ್ರೀಯ ಮಟ್ಟದ ಭತ್ತ ಸಂಶೋಧನಾ ಕೇಂದ್ರ ಸ್ಥಾಪನೆ ಬಗ್ಗೆಯೂ ಸಚಿವರು ಸಮಾಲೋಚನೆ ನಡೆಸಿದ್ದಾರೆ.* ಫಿಲಿಪೈನ್ಸನ್ ಸಂಸ್ಥೆ ಜೊತೆಗೆ ಮಂಡ್ಯ ಕೃಷಿ ವಿಶ್ವ ವಿದ್ಯಾಲಯ ಒಪ್ಪಂದದ ಸಹಿ ಹಾಕಿ ವಿನಿಮಯ ಮಾಡಿಕೊಂಡರು.* ಕೃಷಿ ಸಚಿವರಾದ ಎನ.ಚೆಲುವರಾಯ ಸ್ವಾಮಿ ಅವರು ಅಧಿಕಾರಿಗಳ ತಂಡದೊಂದಿಗೆ ಅಂತರರಾಷ್ಟ್ರೀಯ ಭತ್ತದ ಸಂಶೋಧನಾ ಕೇಂದ್ರದ ಜಿನ ಬ್ಯಾಂಕ್ ಒಳಗೊಂಡಂತೆ ವಿವಿಧ ಪ್ರಯೋಗಾಲಯಗಳಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.* ವಿವಿಧ ಜೈವಿಕ ಮತ್ತು ಅಜೈವಿಕ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದು,ಪೌಷ್ಠಕಾಂಶವುಳ್ಳ ಅಧಿಕ ಇಳುವರಿಯ ತರುವ ಬೇಸಾಯ ಕ್ರಮಗಳು ಮತ್ತು ಭತ್ತದ ಸಂಶೋಧನೆಗೆ ಈ ಒಡಂಬಡಿಕೆ ನೆರವಾಗಲಿದೆ ಎಂದು ಕೃಷಿ ಇಲಾಖೆ ಪ್ರಕಟಣೆ ತಿಳಿಸಿದೆ.* ಭತ್ತದ ಮಹತ್ವ,ಉಭಯ ದೇಶಗಳು ಅನುಸರಿಸುತ್ತಿರುವ ಬೇಸಾಯ ಕ್ರಮಗಳು,ಮೌಲ್ಯ ವರ್ಧನೆಗೆ ಅನುಸರಿಸಬೇಕಾದ ಮಾರ್ಗೋಪಾಯಗಳ ಬಗ್ಗೆ ಮಾಹಿತಿ ಹಾಗು ಅನುಭವಗಳನ್ನು ವಿನಿಮಯ ಮಾಡಿಕೊಳ್ಳಲಾಯಿತು.