Job Description: * ರಾಜ್ಯ ಸರ್ಕಾರ ಬುಧವಾರ (ಅ.30) 69ನೇ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಜಾನಪದ ಗಾಯಕರಾದ ಪಿಚ್ಚಳ್ಳಿ ಶ್ರೀನಿವಾಸ್ ಜನಾರ್ಧನ್ ಜನ್ನಿ, ಜನಪರ ವಕೀಲರಾದ ಎಸ್‌ ಬಾಲನ್, ಹಿರಿಯ ಪತ್ರಕರ್ತರಾದ ಸನತ್‌ಕುಮಾರ್ ಬೆಳಗಲಿ, ಎನ್‌ಎಸ್‌ ಶಂಕರ್ ಸೇರಿದಂತೆ 69 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಕಟಿಸಿದೆ.* ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಪ್ರಶಸ್ತಿ ಘೋಷಣೆ ಮಾಡಿದರು.* ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗಾಗಿ ಒಟ್ಟು 1,575 ಭೌತಿಕ ಅರ್ಜಿಗಳು ಬಂದಿದ್ದವು. ಇದಲ್ಲದೇ ಸೇವಾ ಸಿಂಧೂ ಮೂಲಕ 1309 ಜನರಿಗಾಗಿ 7,438 ನಾಮನಿರ್ದೇಶನಗಳು ಸಲ್ಲಿಕೆಯಾಗಿದ್ದವು. ಇವುಗಳನ್ನೆಲ್ಲಾ ಕೂಲಂಕುಷವಾಗಿ ಪರಿಶೀಲನೆ ಮಾಡಿ ಅರ್ಹರ ಆಯ್ಕೆ ಮಾಡಲಾಗಿದೆ. * ಸಂಘ ಸಂಸ್ಥೆಗಳು ಹಾಗೂ ವೈಯಕ್ತಿಕವಾಗಿ ಒಟ್ಟು 69 ಗಣ್ಯರಿಗೆ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದ್ದು, ನವೆಂಬರ್‌ 1ರಂದು ನಡೆಯುವ ಅದ್ಧೂರಿ ಕಾರ್ಯಕ್ರಮದಲ್ಲಿ ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ.* 69 ಸಾಧಕರ ಪಟ್ಟಿ : - ಚಲನಚಿತ್ರ-ಕಿರುತೆರೆಹೇಮಾ ಚೌಧರಿಎಂಎಸ್ ನರಸಿಂಹಮೂರ್ತಿ- ಜಾನಪದ ಕ್ಷೇತ್ರಇಮಾಮಸಾಬ ಎಂ. ವಲ್ಲೆಪನವರಅಶ್ವ ರಾಮಣ್ಣಕುಮಾರಯ್ಯವೀರಭದ್ರಯ್ಯನರಸಿಂಹಲು (ಅಂಧ ಕಲಾವಿದ)ಬಸವರಾಜ ಸಂಗಪ್ಪ ಹಾರಿವಾಳಎಸ್.ಜಿ. ಲಕ್ಷ್ಮೀದೇವಮ್ಮಪಿಚ್ಚಳ್ಳಿ ಶ್ರೀನಿವಾಸಲೋಕಯ್ಯ ಶೇರ (ಭೂತಾರಾಧನೆ)- ಸಂಗೀತ ಕ್ಷೇತ್ರಪಿ ರಾಜಗೋಪಾಲಎಎನ್ ಸದಾಶಿವಪ್ಪ- ನೃತ್ಯ: ವಿದುಷಿ ಲಲಿತಾ ರಾವ್,- ಆಡಳಿತ ಕ್ಷೇತ್ರ: ಎಸ್ವಿ ರಂಗನಾಥ್( ಮಾಜಿ ಮುಖ್ಯ ಕಾರ್ಯದರ್ಶಿ)- ವೈದ್ಯಕೀಯ ಕ್ಷೇತ್ರ: ಡಾ ಜೆಬಿ ಬಿಡನಹಾಳ, ಡಾ ಮೈಸೂರು ಸತ್ಯಾನಾರಾಯಣ. ಡಾ ಲಕ್ಷ್ಮಣ ಹನುಮಂತಪ್ಪ ಬಿದರಿ- ಸಮಾಜ ಸೇವೆ: ವೀರಸಂಗಯ್ಯ, ಹೀರಾಚಂದ್ ವಾಗ್ಮರೆ, ಮಲ್ಲಮ್ಮ ಸೂಲಗಿತ್ತಿ, ದಿಲೀಪ್ ಕುಮಾರ್.- ಸಂಕೀರ್ಣ ಕ್ಷೇತ್ರ: ಹುಲಿಕಲ್ ನಟರಾಜ್, ಹೆಚ್ಆರ್ ಸ್ವಾಮಿ, ಪ್ರಹ್ಲಾದ ರಾವ್, ಕೆ ಅಜಿತ್ ಕುಮಾರ್ ರೈ, ಇರ್ಫಾನ್ ರಜಾಕ್, ವಿರೂಪಾಕ್ಷಪ್ಪ ರಾಮಚಂದ್ರಪ್ಪ ಹಾವನೂರು,- ಹೊರದೇಶ-ಹೊರನಾಡು: ಕನ್ನಯ್ಯ ನಾಯ್ಡು, ಡಾ. ತುಂಬೆ ಮೊಹಿಯುದ್ದೀನ್, ಚಂದ್ರಶೇಖರ್ ನಾಯಕ್ ಪರಿಸರ: ಆಲ್ಮಿತ್ರಾ ಪಟೇಲ್- ಕೃಷಿ: ಶಿವನಾಪುರ ರಮೇಶ, ಪುಟ್ಟೀರಮ್ಮ- ಮಾಧ್ಯಮ: ಎನ್.ಎಸ್. ಶಂಕರ್, ಸನತ್ ಕುಮಾರ್ ಬೆಳಗಲಿ, ಎ.ಜಿ. ಕಾರಟಗಿ, ರಾಮಕೃಷ್ಣ ಬಡಶೇಶಿ- ಸಾಹಿತ್ಯ ಕ್ಷೇತ್ರ: ಮಾಜಿ ಸಚಿವೆ ಬಿ.ಟಿ. ಲಿಲಿತಾ ನಾಯಕ್, ಅಲ್ಲಮಪ್ರಭು ಬೆಟ್ಟದೂರು. ಡಾ. ಎಂ. ವೀರಪ್ಪ ಮೊಯಿಲಿ. ಹನುಮಂತರಾವ್ ದೊಡ್ಡಮನಿ, ಡಾ. ಬಾಳಾಸಾಹೇಬ್ ಲೋಕಾಪುರ, ಬೈರಮಂಗಲ ರಾಮೇಗೌಡ. ಡಾ. ಪ್ರಶಾಂತ್ ಮಾಡ್ತಾ ಶಿಕ್ಷಣ: ಡಾ. ವಿ. ಕಮಲಮ್ಮ, ಡಾ. ರಾಜೇಂದ್ರ ಶೆಟ್ಟಿ., ಡಾ. ಪದ್ಮಾ ಶೇಖರ್- ಶಿಲ್ಪಕಲೆ ಕ್ಷೇತ್ರ: ಶಿಲ್ಪಿ ಅರುಣ್ ಯೋಗಿರಾಜ್ (ಅಯೋಧ್ಯಾ ಬಾಲರಾಮನ ಶಿಲ್ಪಿ)- ವಿಜ್ಞಾನ-ತಂತ್ರಜ್ಞಾನ: ಪ್ರೊ. ಟಿ.ವಿ. ರಾಮಚಂದ್ರ, ಸುಬ್ಬಯ್ಯ ಅರುಣನ್ ಸಹಕಾರ: ವಿರೂಪಾಕ್ಷಪ್ಪ ನೇಕಾರ ಬಯಲಾಟ: ಸಿದ್ಧಪ್ಪ ಕರಿಯಪ್ಪ(ಅಂಧ ಕಲಾವಿದ), ನಾರಾಯಣಪ್ಪ ಶಿಳ್ಳೇಕ್ಯಾತ- ಯಕ್ಷಗಾನ : ಕೇಶವ್ ಹೆಗಡೆ, ಸೀತಾರಾಮ ತೋಳ್ಪಾಡಿ ರಂಗಭೂಮಿ: ಸರಸ್ವತಿ ಜುಲೈಕ ಬೇಗಂ, ಓಬಳೇಶ್ ಹೆಚ್.ಬಿ., ಭಾಗ್ಯಶ್ರೀ ರವಿ, ಡಿ. ರಾಮು, ಜನಾರ್ಧನ್ ಹೆಚ್‌., ಹನುಮಾನದಾಸ ವ. ಪವಾರ.- ಕ್ರೀಡೆ: ಜೂಡ್ ಫೆಲಿಕ್ಸ್ ಸೆಬಾಸ್ಟಿಯನ್, ಗೌತಮ್ ವರ್ಮ, ಆರ್‌. ಉಮಾದೇವಿ- ನ್ಯಾಯಾಂಗ : ಬಾಲನ್ - ಚಿತ್ರಕಲೆ: ಪ್ರಭು ಹರಸೂರು - ಕರಕುಶಲ: ಚಂದ್ರಶೇಖರ ಸಿರಿವಂತೆ