Job Description: * ಪ್ರಸ್ತುತ ರಾಜ್ಯದಲ್ಲಿನ ಯಶಸ್ವಿನಿ ಯೋಜನೆಯನ್ನು ಪರಿಷ್ಕರಿಸಿ ಮರು ಜಾರಿಗೆ ಸರ್ಕಾರವು ಆದೇಶವನ್ನು ಹೊರಡಿಸಿದೆ. * ಈ ಹಿಂದೆ ಯಶಸ್ವಿನಿ ಯೋಜನೆ ಜಾರಿಗಾಗಿ ಒತ್ತಾಯ ಹೇರಲಾಗಿತ್ತು ಇದೀಗ ರಾಜ್ಯದಲ್ಲಿ ಯಶಸ್ವಿನಿ ಯೋಜನೆ ಮರು ಜಾರಿಗೆ ತರಲು ಸರ್ಕಾರ ಆದೇಶ ಹೊರಡಿಸಿದೆ. ಇದೀಗ 2022 -23ನೇ ಸಾಲಿನ ರಾಜ್ಯ ಬಜೆಟ್'ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿರುವಂತೆ ಏಪ್ರಿಲ್. 1 ರಂದು ಯಶಸ್ವಿನಿ ಯೋಜನೆ ಮರು ಜಾರಿಗೆ ಸಿದ್ಧತೆಗಳನ್ನು ನಡೆಸಲಾಗುತ್ತಿದೆ ಎಂದಿದ್ದಾರೆ. * ಕೇಂದ್ರ ಸಹಕಾರ ಸಚಿವರಾದ ಅಮಿತ್ ಶಾ ರವರು ಕರ್ನಾಟಕ ರಾಜ್ಯದಲ್ಲಿ ಯಶಸ್ವಿನಿ ಯೋಜನೆಗೆ ಮರು ಜಾರಿಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿದು ಬಂದಿದೆ. * ಯಶಸ್ವಿನಿ ಯೋಜನೆಯನ್ನು ಈ ಹಿಂದೆ ಎಸ್.ಎಂ. ಕೃಷ್ಣ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಾರಿಗೆ ತರಲಾಗಿತ್ತು. ಈ ಯೋಜನೆಯಿಂದಾಗಿ ರೈತರು, ಗ್ರಾಮೀಣ ಪ್ರದೇಶದ ಬಡವರಿಗೆ ನೆರವಾಗಿತ್ತು. ನಂತರದ ದಿನಗಳಲ್ಲಿ ಆಯುಷ್ಮಾನ್ ಯೋಜನೆ ಜಾರಿಯಾಗಿತ್ತು ಈ ಹಿನ್ನಲೆಯಿಂದಾಗಿ ಯಶಸ್ವಿನಿ ಯೋಜನೆ ಸ್ಥಗಿತಗೊಂಡಿತ್ತು. ಇದೀಗ ಈ ಯಶಸ್ವಿನಿ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.* ಯಶಸ್ವಿನಿ ಸಹಕಾರಿ ರೈತರ ಆರೋಗ್ಯ ರಕ್ಷಣಾ ಯೋಜನೆಯು ಸಹಕಾರಿ ಇಲಾಖೆಯಲ್ಲಿ ನೋಂದಾಯಿತ ಸೌಜನ್ಯ ಸಹಕಾರಿ ಸಂಘಗಳ ರೈತರಿಗೆ ವೆಚ್ಚ-ಪರಿಣಾಮಕಾರಿ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುತ್ತದೆ. ಈ ಯೋಜನೆಯು ಕೆಳ-ಮಧ್ಯಮ ಆದಾಯ ಮತ್ತು ಮಧ್ಯಮ-ಆದಾಯದ ಗುಂಪುಗಳಲ್ಲಿ ಅನೌಪಚಾರಿಕ ಕೆಲಸಗಾರರನ್ನು ಗುರಿಯಾಗಿಸುತ್ತದೆ. ಬೇರೆ ರೀತಿಯಲ್ಲಿ ಹೇಳುವುದಾದರೆ, ಅವನು ಅಥವಾ ಅವಳು ಯಾವುದೇ ಸಹಕಾರಿ ಸಂಘದ ಸದಸ್ಯರಾಗಿದ್ದರೆ ಕರ್ನಾಟಕದ ಯಾವುದೇ ರೈತರು ಹೊಂದಬಹುದು.