Job Description: * ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು ಅಭ್ಯಸಿಸಿದ ಶಾಲೆಗಳು ಮತ್ತು ಶತಮಾನ ಪೂರೈಸಿದ ರಾಜ್ಯದ ಸರ್ಕಾರಿ ಶಾಲೆಗಳ ಸಮಗ್ರ ಅಭಿವೃದ್ಧಿಗೆ ಕ್ರಮ. * ಸರ್ಕಾರಿ ಶಾಲಾ ಹಾಗೂ ಪದವಿ ಪೂರ್ವ ಕಾಲೇಜುಗಳ ಶೌಚಾಲಯ ನಿರ್ಮಾಣ ಹಾಗೂ ದುರಸ್ತಿಗಾಗಿ ಒಟ್ಟು 250 ಕೋಟಿ ಅನುದಾನ ಬಿಡುಗಡೆ. * ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸವಿ ನೆನಪಿಗಾಗಿ 750 ಸರ್ಕಾರಿ ಶಾಲೆಗಳ ಸಮಗ್ರ ಅಭಿವೃದ್ಧಿ ಕ್ರಮ. * ಸರ್ಕಾರಿ ಶಾಲಾ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಪೀಠೋಪಕರಣಗಳನ್ನು ಸರಬರಾಜು ಮಾಡಲು ಒಟ್ಟು 100 ಕೋಟಿ ಅನುದಾನ ಬಿಡುಗಡೆ.* 32,159 ಅತಿಥಿ ಶಿಕ್ಷಕರನ್ನು ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಹಾಗೂ 3,708 ಅತಿಥಿ ಉಪನ್ಯಾಸಕರನ್ನು ಪದವಿ ಪೂರ್ವ ಕಾಲೇಜುಗಳಲ್ಲಿ ನೇಮಕ ಮಾಡಲಾಗಿದೆ. * ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರ ಗೌರವ ಧನ 2,500 ಗಳಷ್ಟು ಹೆಚ್ಚಳ.* ಪ್ರೌಢ ಶಾಲಾ ಅತಿಥಿ ಶಿಕ್ಷಕರ ಗೌರವ ಧನ 2,500 ರಷ್ಟು ಹೆಚ್ಚಳ.* ಪದವಿ ಪೂರ್ವ ಕಾಲೇಜು ಉಪನ್ಯಾಸಕರಿಗೆ ಗೌರವ ಧನ 3,000 ಹೆಚ್ಚಳ.* ಬಿಸಿಯೂಟ ಕಾರ್ಯಕರ್ತರಿಗೆ ಗೌರವ ಧನ 1,000 ಹೆಚ್ಚಳ.* ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಯಾಗಾಗಿ ಪ್ರತಿಭಾ ಕಾರಂಜಿ, ವಿಜ್ಞಾನ ಮೇಳ, ಯುವ ಸಂಸತ್ ಹಾಗೂ ಕ್ರೀಡಾಕೂಟಗಳನ್ನು ಆಯೋಜಿಸಲಾಗುತ್ತಿದೆ. * ರಾಷ್ಟೀಯ ಶಿಕ್ಷಣ ನೀತಿ - 2020 ಅನುಷ್ಟಾನಕ್ಕೆ ಸ್ಪಷ್ಟ ಕ್ರಮಗಳು. * ವಿದ್ಯಾರ್ಥಿಗಳಿಗೆ ಪೌಷ್ಟಿಕ ಆಹಾರ ಒದಗಿಸುವಲ್ಲಿ ಬಿಸಿ ಊಟ, ಹಾಲು, ಮೊಟ್ಟೆ, ಹಣ್ಣನ್ನು ಒದಗಿಸೇಲಾಗುತ್ತಿದೆ. * 45.42 ಲಕ್ಷ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ, ಶೂ ಮತ್ತು ಸಾಕ್ಸ್ ವಿತರಣೆ.* 59.04 ಸರ್ಕಾರಿ ಹಾಗೂ ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪಠ್ಯ ಪುಸ್ತಕ ವಿತರಣೆ.* ವಿದ್ಯಾರ್ಥಿಗಳ ಅರೋಗ್ಯ ತಾಪಸನೆ ಹಾಗೂ ಅಗತ್ಯ ಇರುವವರಿಗೆ ಹೆಚ್ಚಿನ ಚಿಕಿತ್ಸೆ.* ಪ್ರಸಕ್ತ ಸಾಲಿನಲ್ಲಿ 15,000 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ.