Job Description: * ಸ್ವಾಮಿ ವಿವೇಕಾನಂದರ ಜನ್ಮದಿನವನ್ನು ಪ್ರತಿವರ್ಷ "ರಾಷ್ಟೀಯ ಯುವ ದಿನ" ವೆಂದು ಆಚರಿಸಲಾಗುತ್ತದೆ. ಸ್ವಾಮಿ ವಿವೇಕಾನಂದರು ಎಲ್ಲರಿಗೂ ಸ್ಫೂರ್ತಿ, ದಾರಿ ದೀಪ. ಇವರ ಬದುಕಿನ ಮೌಲ್ಯ, ಸಂದೇಶಗಳು ಇಂದಿಗೂ ಪ್ರಸ್ತುತ. ಜಗತ್ತಿಗೆ ಜ್ಞಾನದ ಬೆಳಕನ್ನು ಹರಿಸಿದ ಗುರುಗಳು ವಿವೇಕಾನಂದರು. * ಜನವರಿ 12ರಂದು ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ - 1863ರ ಜನವರಿ 12 ರಂದು ಜನಿಸಿದ ಸ್ವಾಮಿ ವಿವೇಕಾನಂದರು - ತನ್ನ ಜೀವನ, ಆದರ್ಶ, ಸಂದೇಶಗಳ ಮೂಲಕ ಎಲ್ಲರ ಹೃದಯ ಗೆದ್ದಿರುವ ವೀರ ಸನ್ಯಾಸಿ - ವಿವೇಕಾನಂದರ ಜನ್ಮದಿನವನ್ನು ರಾಷ್ಟ್ರೀಯ ಯುವ ದಿನವಾಗಿ ಆಚರಣೆ ಮಾಡಲಾಗುತ್ತದೆ.* ನಮ್ಮ ದೇಶ ಕಂಡ ಅಪ್ರತಿಮ ಆಧ್ಯಾತ್ಮಿಕ ನಾಯಕ, ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ ಮಾತುಗಳಿವುಗಳು. ವಿಶ್ವವನ್ನೇ ಬೆರಗುಗೊಳಿಸಿದ ಮಹಾನ್ ಸಂತರಿವರು. ಅದ್ಭುತ ತತ್ವಜ್ಞಾನಿ, ಸಮಾಜ ಸುಧಾರಕ, ಮಹಾನ್ ದೇಶಭಕ್ತ ಮತ್ತು ಶ್ರೇಷ್ಠ ವಾಗ್ಮಿ ವಿವೇಕಾನಂದರ ಮಾತುಗಳು ಇಂದಿಗೂ ಪ್ರಸ್ತುತ. ಇವರ ಮಾತುಗಳು ಎಲ್ಲರಿಗೂ ಸ್ಫೂರ್ತಿ.