Job Description: ದಾವಣಗೆರೆ : ನವದೆಹಲಿಯಲ್ಲಿ ನಡೆಯುವ 2020ನೇ ಗಣರಾಜ್ಯೋತ್ಸವದ ಎನ್ಸಿಸಿ ಪರೇಡ್ ಗೆ ಬೆಣ್ಣೆ ನಗರಿ ದಾವಣಗೆರೆ ಯುವತಿ ಲೀಡರ್ ಆಗಿ ಸೆಲೆಕ್ಟ್ ಆಗಿದ್ದಾಳೆ. ಇದೇ ಜನವರಿ 26 ರಂದು ನವದೆಹಲಿಯ ರಾಜಪಥ್ ನಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪರೇಡ್ ಗೆ ದಾವಣಗೆರೆ ಜಿಲ್ಲೆಯ ಹರಿಹರದ ಯುವತಿ ಶ್ರೀಷ್ಮಾ ಹೆಗ್ಡೆ ಎನ್ಸಿಸಿ ಪರೇಡ್ ಲೀಡರ್ ಆಗಿ ಕಾರ್ಯನಿರ್ವಹಿಸಲಿದ್ದಾಳೆ.