Job Description: ಉಡುಪಿ : ರಾಷ್ಟ್ರಕವಿ ಗೋವಿಂದಪೈ ಸಂಶೋಧನಾ ಕೇಂದ್ರ ಇವರು ಕೊಡಮಾಡುವ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿಯ 2020ನೇ ಸಾಲಿಗೆ ಖ್ಯಾತ ವಿದ್ವಾಂಸ ಹಾಗೂ ಯಕ್ಷಗಾನ ಅರ್ಥಧಾರಿಯಾದ ಡಾ.ಎಂ.ಪ್ರಭಾಕರ ಜೋಶಿಯವರು ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು ₹10,000 ರೂಪಾಯಿ ನಗದು ಮತ್ತು ಪ್ರಶಸ್ತಿ ಪತ್ರ ಒಳಗೊಂಡಿದೆ.