Job Description: ಬೆಂಗಳೂರು : ರಾಜ್ಯದಲ್ಲಿ ವಿಧಿಸಿರುವ ಲಾಕ್ ಡೌನ್ ನಿಂದಾಗಿ ಸಂಕಷ್ಟದಲ್ಲಿರುವ ರಾಜ್ಯದ ನೇಕಾರರಿಗೆ ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ "ನೇಕಾರ್ ಸಮ್ಮಾನ್" ಯೋಜನೆ ಘೋಷಿಸಿದ್ದಾರೆ. ಈ ಯೋಜನೆಯಡಿ ನೇಕಾರರಿಗೆ ಪ್ರತಿ ವರ್ಷ 2 ಸಾವಿರ ರೂ. ಆರ್ಥಿಕ ನೆರವು ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ. * ಲಾಕ್ ಡೌನ್ ನಿಂದ ಸಂಕಷ್ಟದಲ್ಲಿರುವ ನೇಕಾರರಿಗೆ 80 ಕೋಟಿ ರೂ. ಸಾಲಮನ್ನಾ ಮಾಡಲು ಹಣ ಬಿಡುಗಡೆಮಾಡಲಾಗಿದ್ದು, ಹೊಸ ಸಾಲ ಪಡೆಯಲು ಕೂಡ ನೇಕಾರರಿಗೆ ಅವಕಾಶ ನೀಡಲಾಗಿದೆ. * ನೇಕಾರರ ಸಮ್ಮಾನ್ ಯೋಜನೆಯಡಿ ರಾಜ್ಯದ ಒಟ್ಟು 54 ಸಾವಿರ ಕೈಮಗ್ಗ ನೇಕಾರರಿಗೆ ಪ್ರತಿ ವರ್ಷ 2 ಸಾವಿರ ರೂ. ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.