* ಹಿರಿಯ ಸಾಹಿತಿ ನಾಡೋಜ ಡಾ. ಹಂಪ ನಾಗರಾಜಯ್ಯ (ಹಂಪನಾ) ಅವರಿಗೆ ಕನ್ನಡ ಜನಶಕ್ತಿ ಕೇಂದ್ರದ ವತಿಯಿಂದ ನೀಡಲಾಗುವ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿಗೆ ಈ ವರ್ಷ ಆಯ್ಕೆ ಮಾಡಲಾಗಿದೆ.* ಈ ಪ್ರಶಸ್ತಿಯು ರೂ. 25,000 ನಗದು, ಕಂಚಿನ ಫಲಕ ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ಸಮಾಜ, ಶಿಕ್ಷಣ, ಸಾಹಿತ್ಯ ಹಾಗೂ ಸಂಸ್ಕೃತಿಕ ಕ್ಷೇತ್ರಗಳಲ್ಲಿ ಅಮೂಲ್ಯ ಸೇವೆ ಸಲ್ಲಿಸಿರುವ ಗಣ್ಯ ವ್ಯಕ್ತಿಗಳಿಗೆ ಈ ಪ್ರಶಸ್ತಿ ಪ್ರತಿವರ್ಷ ನೀಡಲಾಗುತ್ತದೆ.* ಹಂಪನಾ ಅವರು ಕನ್ನಡ ಸಾಹಿತ್ಯ ಪರಿಷತ್ನಲ್ಲಿ ಗೌರವ ಕಾರ್ಯದರ್ಶಿ ಹಾಗೂ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ, ಸುಮಾರು 300 ಮೌಲಿಕ ಕೃತಿಗಳನ್ನು ಪ್ರಕಟಿಸಿದ್ದನ್ನು ಹೆಮ್ಮೆಪಡುವುದಾಗಿದೆ. ಅವರ ಅಧ್ಯಕ್ಷತೆಯಲ್ಲಿ ಕಸಾಪದ ಚಿನ್ನದ ಹಬ್ಬದ ನೆನಪಿಗಾಗಿ ಭವ್ಯ ಕಟ್ಟಡವೊಂದನ್ನೂ ನಿರ್ಮಿಸಲಾಗಿದೆ. * 50ಕ್ಕೂ ಹೆಚ್ಚು ವರ್ಷಗಳ ಕಾಲ ಸಾಹಿತ್ಯ ಸೇವೆ ಸಲ್ಲಿಸಿರುವ ಅವರು 115ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ.* ಜೂನ್ 11ರಂದು ಬೆಂಗಳೂರಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.* ಹಿರಿಯ ಸಾಹಿತಿ ಗೊ.ರು. ಚನ್ನಬಸಪ್ಪ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದು, ಕವಿ ಪಿ. ಮಲ್ಲಿಕಾರ್ಜುನಪ್ಪ ಹಾಗೂ ಇತರರು ಭಾಗವಹಿಸಲಿದ್ದಾರೆ.