* ಕಾಮಗಾರಿಗಳ ಗುತ್ತಿಗೆಯಲ್ಲಿ ಶೇಕಡಾ 4 ಮೀಸಲಾತಿ ನೀಡುವ ತಿದ್ದುಪಡಿ ಮಸೂದೆಗೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅಂಕಿತ ಹಾಕಲು ನಿರಾಕರಿಸಿದ್ದಾರೆ.* ಮುಸ್ಲಿಂ ಗುತ್ತಿಗೆದಾರರಿಗೆ ಶೇ 4 ಮೀಸಲಾತಿ ನೀಡುವ ಪ್ರಸ್ತಾವನೆ ಧರ್ಮ ಆಧಾರಿತವಾಗಿದ್ದು, ಇದು ಸಂವಿಧಾನದ ವಿಧಿಗಳು 14, 15, 16ಕ್ಕೆ ವಿರುದ್ಧ ಎಂದು ರಾಜ್ಯಪಾಲರು ಅಭಿಪ್ರಾಯಪಟ್ಟಿದ್ದಾರೆ. ಮಸೂದೆಯನ್ನು ರಾಷ್ಟ್ರಪತಿಗೆ ಪರಿಶೀಲನೆಗಾಗಿ ಕಳುಹಿಸುವಂತೆ ಹೇಳಿದರು.* ಸುಪ್ರೀಂ ಕೋರ್ಟ್ ಹಾಗೂ ಕಲ್ಕತ್ತಾ ಹೈಕೋರ್ಟ್ ಆದೇಶಗಳನ್ನು ಉಲ್ಲೇಖಿಸಿ ಧರ್ಮಾಧಾರಿತ ಮೀಸಲಾತಿಗೆ ವಿರೋಧ ವ್ಯಕ್ತಪಡಿಸಿದ್ದಾರೆ.* ಮುಸ್ಲಿಮರಿಗೆ ಮೀಸಲಾತಿ ಸಂಬಂಧಿತ ಪ್ರಕರಣಗಳು ಈಗಾಗಲೇ ಸುಪ್ರೀಂ ಕೋರ್ಟ್ ಎದುರು ವಿಚಾರಣೆಯಲ್ಲಿವೆ.* ಸರ್ಕಾರವು ಆಯೋಗದ ಜೊತೆ ಸಮಾಲೋಚನೆ ಇಲ್ಲದೇ ನಿಯಮ ರೂಪಿಸಲು ಪ್ರಯತ್ನಿಸುತ್ತಿರುವ ತಿದ್ದುಪಡಿ ಸಂವಿಧಾನ ವಿರೋಧಿ ಎಂದು ರಾಜ್ಯಪಾಲರು ಹೇಳಿದ್ದಾರೆ.* ಸ್ಪಷ್ಟೀಕರಣ ಕೇಳಿ ಮಸೂದೆಯನ್ನು ಸರ್ಕಾರಕ್ಕೆ ಹಿಂದಿರುಗಿಸಿದ್ದಾರೆ.