* ಭಾರತದ ಹಾಲು ಉತ್ಪಾದಕರ ಸಹಕಾರಿ ಕ್ಷೇತ್ರವನ್ನು ಬಲವರ್ಧನೆಗೆ ಒತ್ತು ನೀಡುವ ನಿಟ್ಟಿನಲ್ಲಿ ಕೇಂದ್ರ ಸಚಿವ ಅಮಿತ್ ಶಾ ಸೆಪ್ಟೆಂಬರ್ 19 ರಂದು ' ಶ್ವೇತ ಕ್ರಾಂತಿ 2.0'ಅನ್ನು ಅನಾವರಣಗೊಳಿಸಿದರು.* ಇದು ಮಹಿಳಾ ರೈತರನ್ನು ಸಬಲೀಕರಣಗೊಳಿಸುವ, ಸ್ಥಳೀಯವಾಗಿ ಹಾಲು ಉತ್ಪಾದನೆ ಹೆಚ್ಚಿಸುವುದು, ಹೈನು ಉತ್ಪನ್ನಗಳ ರಫ್ತಿಗೆ ಉತ್ತೇಜಿಸುವ ಮತ್ತು ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಗುರಿಯನ್ನು ಹೊಂದಿದೆ.* "ಗರಿಷ್ಠ ಮಹಿಳೆಯರು ಹೈನುಗಾರಿಕೆ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ, ಗುಜರಾತ್ ಒಂದರಲ್ಲೇ 60,000 ಕೋಟಿ ರೂ.ಗಳ ವಹಿವಾಟು ನಡೆಸುತ್ತಿದ್ದಾರೆ. ಈ ಹೊಸ ಉಪಕ್ರಮವು ಮಹಿಳೆಯರ ಸಬಲೀಕರಣ ಮತ್ತು ಅಪೌಷ್ಟಿಕತೆಯ ವಿರುದ್ಧದ ಹೋರಾಟವನ್ನು ಮತ್ತಷ್ಟು ಬಲಪಡಿಸುವತ್ತ ಗಮನಹರಿಸುತ್ತದೆ" ಎಂದು ಸಭೆಯನ್ನು ಉದ್ದೇಶಿಸಿ ಅಮಿತ್ ಶಾ ಹೇಳಿದರು. * ಹೈನುಗಾರರಿಗೆ ರುಪೇ ಕಿಸಾನ್ ಕ್ರೆಡಿಟ್ ಕಾರ್ಡ್‌ಗಳ ರಾಷ್ಟ್ರವ್ಯಾಪಿ ರೋಲ್‌ಔಟ್ ಮತ್ತು ಡೈರಿ ಸಹಕಾರ ಸಂಘಗಳಲ್ಲಿ ಮೈಕ್ರೋ ಎಟಿಎಂ ಸ್ಥಾಪನೆಗೆ ಸಚಿವರು ಚಾಲನೆ ನೀಡಿದರು.* ಶ್ವೇತ ಕ್ರಾಂತಿ 2.0 ಅಡಿಯಲ್ಲಿ ಮುಂದಿನ ಐದು ವರ್ಷಗಳಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘಗಳಿಂದ ಹಾಲು ಸಂಗ್ರಹಣೆಯನ್ನು ಶೇಕಡಾ 50 ರಷ್ಟು ಹೆಚ್ಚಿಸುವ ಗುರಿಯನ್ನು ಸರ್ಕಾರ ಹೊಂದಿದೆ.* ಈ ಉಪಕ್ರಮಗಳೊಂದಿಗೆ, ಸಹಕಾರಿ ಕ್ಷೇತ್ರವನ್ನು ಬಲಪಡಿಸುವ ಮತ್ತು ವಿಸ್ತರಿಸುವ ಗುರಿಯನ್ನು ಸರ್ಕಾರ ಹೊಂದಿದೆ, ಇದು ದೇಶದಾದ್ಯಂತ ಸುಮಾರು 13 ಕೋಟಿ ರೈತರಿಗೆ ಪ್ರಯೋಜನಕಾರಿಯಾಗಿದೆ.