* ಅಧಿಕ ಇಳುವರಿ, ಪೌಷ್ಠಿಕಾಂಶ ಹೆಚ್ಚಿಸಬಲ್ಲ ಮತ್ತು ಯಾವುದೇ ಹವಾಮಾನಕ್ಕೆ ಹೊಂದಿಕೊಳ್ಳುವ ಜೈವಿಕ ಬಲವರ್ಧಿತ ಬೆಳೆಗಳ 109 ತಳಿಗಳನ್ನು ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 11ರಂದು ಬಿಡುಗಡೆ ಮಾಡಿದರು.* ಕೃಷಿ ಮತ್ತು ತೋಟಗಾರಿಕೆ ಬೆಳಗಳ ಬೀಜಗಳಾಗಿದ್ದು, ಉತ್ಪಾದಕತೆ ಮತ್ತು ರೈತರ ಆದಾಯ ಹೆಚ್ಚಿಸುವ ಗುರಿಯನ್ನು ಹೊಂದಿದೆ. 27 ತೋಟಗಾರಿಕಾ ಬೆಳೆಗಳು, 34 ಕ್ಷೇತ್ರ ಬೆಳೆಗಳು ಮತ್ತು 61 ಬೆಳೆಗಳು ಸೇರಿ ಒಟ್ಟು 109 ತಳಿಗಳ ಬಿಡುಗಡೆ ಮಾಡಿದ್ದಾರೆ.* 109 ಬೀಜ ತಳಿಗಳಲ್ಲಿ 13 ತಳಿಗಳನ್ನು ಬೆಂಗಳೂರಿನ ಅರ್ಕಾವತಿ ನದಿಯ ದಡದಲ್ಲಿರುವ ಹಸರುಘಟ್ಟದ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಹಾರ್ಟಿ ಕಲ್ಚರ್ ರಿಸರ್ಚ್ ಸೆಂಟರ್ನಲ್ಲಿ ಸಂಶೋಧಿಸಿ ಅಭಿವೃದ್ಧಿಪಡಿಸಲಾಗಿದೆ.* ಹವಾಮಾನ ಬದಲಾವಣೆಯ ಸಂದರ್ಭದಲ್ಲಿ ಕೃಷಿ ಉತ್ಪಾದಕತೆ ಹೆಚ್ಚಿಸುವ ಪ್ರಯತ್ನಗಳಲ್ಲಿ ಈ ಹೊಸ ಪ್ರಭೇದಗಳು ಸಹಕಾರಿಯಾಗಿವೆ ಎಂದು ಭಾರತೀಯ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ತಿಳಿಸಿದರು.* ನವದೆಹಲಿಯ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ರೈತರು ಮತ್ತು ಕೃಷಿ ವಿಜ್ಞಾನಿಗಳ ಜೊತೆಗೆ ಸಂವಾದ ನಡೆಸಿದ ಪ್ರಧಾನಿ ಮೋದಿ ಕೃಷಿಯಲ್ಲಿ ಹೊಸ ಪ್ರಭೇದಗಳ ಆವಿಷ್ಕಾರ ರೈತರ ವೆಚ್ಚವನ್ನು ಕಡಿಮೆ ಮಾಡುವುದಲ್ಲದೆ ಪರಿಸರದ ಮೇಲೆ ಹೇಗೆ ಧನಾತ್ಮಕ ಪರಿಣಾಮ ಬೀರುತ್ತದೆ ಎಂಬುದರ ಬಗ್ಗೆ ಚರ್ಚಿಸಿದರು.