* ಅಣ್ವಸ್ತ್ರ ಸಾಮರ್ಥ್ಯದ ಹೊಸ ಪೀಳಿಗೆಯ ಗುರಿ ನಿರ್ದೇಶಿತ ಕ್ಷಿಪಣಿ 'ಅಗ್ನಿಪ್ರೈಮ್' ಅನ್ನು ಭಾರತವು ಒಡಿಶಾ ಕರಾವಳಿಯ ಎಪಿಜೆ ಅಬ್ದುಲ್ ಕಲಾಂ ದ್ವೀಪದಲ್ಲಿ ಏಪ್ರಿಲ್ 03 (ಬುಧವಾರ) ರಂದು ಬ್ಯಾಲಿಸ್ಟಿಕ್ ಕ್ಷಿಪಣಿ ಪರೀಕ್ಷಾರ್ಥ ಹಾರಾಟ ಯಶಸ್ವಿಯಾಗಿ ಉಡಾಯಿಸಿದೆ.* ಅಗ್ನಿ ಪ್ರೈಮ್ ಕ್ಷಿಪಣಿಯು ನಿಗದಿತ ಗುರಿ ಸಾಧಿಸಿದ್ದು, ಭಾರತೀಯ ಸೇನೆಗೆ ಮತ್ತೊಂದು ಬಲ ಬಂದಂತಾಗಿದೆ. ಟರ್ಮಿನಲ್ ಪಾಯಿಂಟ್‌ನಲ್ಲಿ ಇರಿಸಲಾದ ಎರಡು ಡೌನ್‌ರೇಂಜ್ ಹಡಗುಗಳು ಸೇರಿದಂತೆ ವಿವಿಧ ಸ್ಥಳಗಳಲ್ಲಿ ನಿಯೋಜಿಸಲಾದ ಹಲವಾರು ರೇಂಜ್ ಸೆನ್ಸಾರ್ ಗಳಿಂದ ಡೇಟಾ ಕಲೆ ಹಾಕಲಾಗಿದ್ದು, ಕ್ಷಿಪಣಿಯು ಉದ್ದೇಶಿತ ಗುರಿಯನ್ನು ಮುಟ್ಟಿದೆ ಎಂದು ರಕ್ಷಣಾ ಸಚಿವಾಲಯ ದೃಢಪಡಿಸಿದೆ. * ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಜತೆಗೆ 'ಸ್ಟ್ರಾಟೆಜಿಕ್ ಫೋರ್ಸಸ್ ಕಮಾಂಡ್' (ಎಸ್‌ಎಫ್‌ಸಿ). ಈ ಉಡಾವಣಾ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿವೆ. ಈ ಕ್ಷಿಪಣಿಯು 1,000ದಿಂದ 2,000 ಕಿ.ಮೀ. ದೂರದ ಗುರಿಯನ್ನು ಭೇದಿಸುವ ಸಾಮರ್ಥ್ಯ ಹೊಂದಿದೆ.* ಅಗ್ನಿ-ಪಿ ಮತ್ತು ಅಗ್ನಿ-5 ಬ್ಯಾಲಿಸ್ಟಿಕ್ ಕ್ಷಿಪಣಿಗಳು ತಮ್ಮ ಮೂಲವನ್ನು ಇಂಟಿಗ್ರೇಟೆಡ್ ಗೈಡೆಡ್ ಮಿಸೈಲ್ ಡೆವಲಪ್‌ಮೆಂಟ್ ಪ್ರೋಗ್ರಾಂ (IGMDP) ಗೆ ಹಿಂದಿನ DRDO ಮುಖ್ಯಸ್ಥ ಎಪಿಜೆ ಅಬ್ದುಲ್ ಕಲಾಂ 1980 ರ ದಶಕದ ಆರಂಭದಲ್ಲಿ ಪ್ರಾರಂಭಿಸಿದರು.