* 'ಹೃದಯಾಘಾತವಾದಾಗ ತುರ್ತಾಗಿ ಚಿಕಿತ್ಸೆ ನೀಡಲು 'ಕರ್ನಾಟಕ ರತ್ನ ಡಾ.ಪುನೀತ್ ರಾಜಕುಮಾರ್ ಹೃದಯಜ್ಯೋತಿ ಯೋಜನೆ' ಜಾರಿ ಗೊಳಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ತಿಳಿಸಿದರು.* ಆರೋಗ್ಯ ಇಲಾಖೆ ವತಿಯಿಂದ ಮಾರ್ಚ್ 15 ರಂದು (ಶುಕ್ರವಾರ) ಆಯೋಜಿಸಲಾಗಿದ್ದ ಕರ್ನಾಟಕ ರತ್ನ ಡಾ.ಪುನೀತ್ ರಾಜಕುಮಾರ್ ಹೃದಯಜ್ಯೋತಿ ಯೋಜನೆ ಉದ್ಘಾಟನಾ ಸಮಾರಂಭದಲ್ಲಿ ದಿನೇಶ್ ಗುಂಡೂರಾವ್ ಅವರು 'ಹೃದಯಾಘಾತವಾದಾಗ ಸುವರ್ಣ ಅವಧಿಯಲ್ಲಿ (ಗೋಲ್ಡನ್ ಹವರ್) ಚಿಕಿತ್ಸೆ ನೀಡಿ ಜೀವ ಉಳಿಸುವುದು ಯೋಜನೆಯ ಉದ್ದೇಶವಾಗಿದೆ' ಎಂದರು.* 'ಸಮುದಾಯ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಇಸಿಜಿ ಮಾಡಿ ತಕ್ಷಣವೇ ಕೃತಕ ಬುದ್ಧಿಮತ್ತೆ (ಎಐ) ಮುಖಾಂತರ ಹೃದಯ ಅಘಾತದ ತೀವ್ರತೆ ಪತ್ತೆ ಮಾಡಲು ಫೋನ್, ಕಿಟ್‌ಗಳ ವ್ಯವಸ್ಥೆ ಮಾಡಲಾಗಿದೆ. * ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ಹೃದಯಾಘಾತದಿಂದ ಜನರ ಜೀವ ರಕ್ಷಿಸುವ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಹಬ್ ಮತ್ತು ಸ್ಪೋಕ್ ಮಾದರಿಯಲ್ಲಿ ಯೋಜನೆ ಜಾರಿಗೆ ತರಲಾಗಿದ್ದು, ರಾಜ್ಯದ 15 ಜಿಲ್ಲೆಗಳ 71ತಾಲೂಕು ಆಸ್ಪತ್ರೆಗಳು ಸೇರಿದಂತೆ ಒಟ್ಟು 86 ಸರ್ಕಾರಿ ಆಸ್ಪತ್ರೆಗಳನ್ನ ಸ್ಪೋಕ್ ಕೇಂದ್ರಗಳನ್ನಾಗಿ ಹಾಗೂ ಜಯದೇವ ಸೇರದಂತೆ 11 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನ ಹಬ್ ಕೇಂದ್ರಗಳನ್ನಾಗಿ ರಚಿಸಲಾಗಿದೆ. * ಹೃದಯಾಘಾತ ರೋಗಿಗಳ ಚಿಕಿತ್ಸೆಗಾಗಿ ಹೆಚ್ಚು ಪರಿಣಾಮಕಾರಿಯಾದ ಔಷಧಿ 25,000/- ರಿಂದ ರೂ.30,000 ಸಾವಿರ ಮೌಲ್ಯದ Injection Tenecteplase (30mg, 40mg) ಎಲ್ಲಾ ತೀವ್ರ ಹೃದಯಾಘಾತ ರೋಗಿಗಳಿಗೆ ;ಸ್ಪೋಕ್ಸ್' ಆಸ್ಪತ್ರೆಗಳಲ್ಲಿಯೇ ಉಚಿತವಾಗಿ ನೀಡಲಾಗುತ್ತದೆ. * ಮೊದಲ ಹಂತದಲ್ಲಿ ಸುಮಾರು 1,23,607 ಹೃದಯಸಂಬಂಧಿ ರೋಗಲಕ್ಷಣ ಹೊಂದಿರುವವರನ್ನು ಈ ಕೇಂದ್ರಗಳಲ್ಲಿ ತಪಾಸಣೆ ಮಾಡಲಾಗಿದ್ದು, 1,27,999 ECG ಗಳನ್ನು ತೆಗೆಯಲಾಗಿದೆ, ಹಾಗು 2,088 ಹೃದಯಾಘಾತ ರೋಗಿಗಳಿಗೆ ಉನ್ನತ ಮಟ್ಟದ ಹಬ್ ಆಸ್ಪತ್ರೆಗಳಲ್ಲಿ 511 ಥಂಬೋಲಿಸಿಸ್, 371 ಆಂಜಿಯೋಪ್ಲಾಸ್ಟಿ, ಮತ್ತು 07 ಬೈಪಾಸ್ ಸರ್ಜರಿಗಳನ್ನ ನಡೆಸಲಾಗಿದೆ. * ಹೃದಯಾಘಾತ ರೋಗಿಗಳ ಉತ್ತಮ ಹಾಗೂ ಗುಣ ಮಟ್ಟದ ನಿರ್ವಹಣೆಗಾಗಿ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಸಿಬ್ಬಂದಿಗಳಿಗೆ 2 ದಿವಸದ CCLS ತರಬೇತಿಯನ್ನು ಮತ್ತು 01 ದಿನದ STLS (Safe Transport Life Support) ತರಬೇತಿಯನ್ನು ಜೀವರಕ್ಷ ಟ್ರಸ್ಟ್ ವತಿಯಿಂದ ನೀಡಲಾಗುವುದು.