* ಜನವರಿ 23 ರಿಂದ 25ರ ವರೆಗೆ ಬೆಂಗಳೂರಿನಲ್ಲಿ ‘ಅಂತಾರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ವಾಣಿಜ್ಯ ಮೇಳ’ ಆಯೋಜಿಸಲಾಗಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.* ವೈವಿಧ್ಯಮಯ ಸೊಪ್ಪು, ಸಿರಿಧಾನ್ಯಗಳು ಮತ್ತು ತರಕಾರಿ ಬೀಜಗಳ ಪ್ರದರ್ಶನವಿರಲಿದೆ ಎಂದು ಸರ್ಕಾರ ತಿಳಿಸಿದೆ.* ಈ ಮೇಳದಲ್ಲಿ ಸ್ವಿಡ್ಜರ್ಲ್ಯಾಂಡ್, ಸ್ಪೇನ್, ಆಸ್ಟ್ರೇಲಿಯಾ, ಕೀನ್ಯಾ, ರೋಮ್ ಸೇರಿದಂತೆ ಅನೇಕ ವಿದೇಶಿ ಸರ್ಕಾರಗಳ ಕೃಷಿ ಮುಖ್ಯಸ್ಥರು ಭಾಗವಹಿಸಲಿದ್ದು, ದೇಶದ 2೦ಕ್ಕೂ ಹೆಚ್ಚು ಮಂತ್ರಿಗಳು, ರೈತ ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆಯಿದೆ ಎಂದು ತಿಳಿಸಿದರು.* ಸಿರಿಧಾನ್ಯ ಮೇಳದ ವಿಚಾರವಾಗಿ ತೈವಾನ್ ರಾಷ್ಟ್ರಕ್ಕೂ ಭೇಟಿ ನೀಡಿ ಮಾಹಿತಿ ನೀಡಲಾಗಿದೆ. ಮಂಡ್ಯದಲ್ಲಿ ನಡೆದ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ವೇಳೆ ಜಾಗೃತಿ ಮೆರವಣಿಗೆ ಹಾಗೂ ಮೇಳದಲ್ಲಿ ಮಳಿಗೆಗಳನ್ನು ನೀಡಿ ಸಿರಿಧ್ಯಾನಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದರು.