* ಪಾಕಿಸ್ತಾನದ ನೆಲದಿಂದ ನಡೆಯುತ್ತಿರುವ ಉಗ್ರ ಚಟುವಟಿಕೆಗಳ ಕುರಿತು ಭಾರತ ತನ್ನ ನಿಲುವು ಜಾಗತಿಕ ಮಟ್ಟದಲ್ಲಿ ಸ್ಪಷ್ಟಪಡಿಸಲು, ಜನತಾದಳ (ಯು) ಸಂಸದ ಸಂಜಯ್ ಝಾ ನೇತೃತ್ವದ ಸರ್ವಪಕ್ಷಗಳ ನಿಯೋಗ ಜಪಾನ್ಗೆ ಭೇಟಿ ನೀಡಿದೆ.* ಈ ನಿಯೋಗ ದಕ್ಷಿಣ ಕೊರಿಯಾ, ಮಲೇಷ್ಯಾ, ಇಂಡೋನೇಷ್ಯಾ ಮತ್ತು ಸಿಂಗಪುರಕ್ಕೂ ಭೇಟಿ ನೀಡಲಿದ್ದು, ಆಪರೇಷನ್ ಸಿಂಧೂರ ನಂತರದ ಭಾರತ–ಪಾಕಿಸ್ತಾನ ನಡುವಿನ ಸಂಘರ್ಷದ ಬಗ್ಗೆ ಭಾರತದ ನಿಲುವು ಹಂಚಿಕೊಳ್ಳುವುದು ಉದ್ದೇಶವಾಗಿದೆ.* ನಿಯೋಗದಲ್ಲಿ ಬಿಜೆಪಿಯ ಅಪರಾಜಿತಾ ಸಾರಂಗಿ, ಬ್ರಿಜ್ಲಾಲ್, ಪ್ರಧಾನ್ ಬರುವಾ, ಹೇಮಾಂಗ್ ಜೋಶಿ, ಕಾಂಗ್ರೆಸ್ನ ಸಲ್ಮಾನ್ ಖುರ್ಷಿದ್, ಟಿಎಂಸಿಯ ಅಭಿಷೇಕ್ ಬ್ಯಾನರ್ಜಿ, ಸಿಪಿಎಂನ ಜಾನ್ ಬ್ರಿಟ್ಟಾಸ್ ಮತ್ತು ಮಾಜಿ ರಾಯಭಾರಿ ಮೋಹನ್ ಕುಮಾರ್ ಸೇರಿದ್ದಾರೆ.* ಶಿವಸೇನಾ ಸಂಸದ ಶ್ರೀಕಾಂತ್ ಶಿಂದೆ ನೇತೃತ್ವದ ಮತ್ತೊಂದು ನಿಯೋಗ ಯುಎಇ, ಲಿಬಿರಿಯಾ, ಕಾಂಗೊ ಮತ್ತು ಸಿಯಾರಾ ಲಿಯೊನ್ಗೆ ತೆರಳಿದ್ದು, ಕೇಂದ್ರ ಸರ್ಕಾರ ಏಳು ಸರ್ವಪಕ್ಷಗಳ ನಿಯೋಗಗಳನ್ನು ವಿವಿಧ ರಾಷ್ಟ್ರಗಳಿಗೆ ಕಳುಹಿಸಿದೆ.