* ರಾಜ್ಯ ಕಾನೂನು ಆಯೋಗದ ಅಧ್ಯಕ್ಷರನ್ನಾಗಿ ಹೈಕೋರ್ಟ್ ನಿವೃತ್ತ ನ್ಯಾಯ ಮೂರ್ತಿ ಅಶೋಕ ಬಿ. ಹಿಂಚಿಗೇರಿ ಅವರನ್ನು ನೇಮಿಸಲು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.* ಈ ಹುದ್ದೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಅಶೋಕ ಬಿ. ಹಿಂಚಿಗೇರಿ ಅವರ ಅಧಿಕಾರ ಅವಧಿ ಇರಲಿದೆ ಎಂದು ಕಾನೂನು ಇಲಾಖೆ ತಿಳಿಸಿದೆ.* 'ಕಾನೂನು ಆಯೋಗದ ಅಧ್ಯಕ್ಷರಾಗಿದ್ದ ಎಸ್.ಆರ್. ಬನ್ನೂರ್‌ಮಠ ಅವರ ಐದು ವರ್ಷಗಳ ಅಧಿಕಾರ ಅವಧಿ ಸೆಪ್ಟೆಂಬರ್ 19ಕ್ಕೆ ಅಂತ್ಯವಾಗಿದ್ದು, ಅವರ ಸ್ಥಾನಕ್ಕೆ ಅಶೋಕ ಹಿಂಚಿಗೇರಿ ಅವರು ನೇಮಕವಾಗಿದ್ದಾರೆ.