* ರಸ್ತೆ ಅಪಘಾತಗಳಲ್ಲಿ ಗಾಯಗೊಂಡವರಿಗೆ ನಗದುರಹಿತ ಚಿಕಿತ್ಸೆ ನೀಡಲು ಕೇಂದ್ರ ಸರ್ಕಾರ ಹೊಸ ಯೋಜನೆಯನ್ನು ಜಾರಿಗೆ ತಂದಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತೀಶ್ ಗಡ್ಕರಿ ಅವರು ತಿಳಿಸಿದ್ದಾರೆ. * ಅಪಘಾತ ನಡೆದ 24 ಗಂಟೆಯೊಳಗೆ ಪೊಲೀಸರಿಗೆ ಮಾಹಿತಿ ಒದಗಿಸಿದರೆ ತಕ್ಷಣವೇ ಗಾಯಾಳುಗಳಿಗೆ ನಗದು ರಹಿತ ಚಿಕಿತ್ಸೆ ನೀಡಲಾಗುವುದು. ಈ ಯೋಜನೆಯಡಿ ಗಾಯಾಳುಗಳು ಗರಿಷ್ಠ 7 ದಿನದವರೆಗೆ ಆಸ್ಪತ್ರೆಯಲ್ಲಿ ಅಥವಾ ಗರಿಷ್ಠ 1.5 ಲಕ್ಷ ರೂ. ಚಿಕಿತ್ಸೆ ಪಡೆಯಲು ಅರ್ಹರಾಗಿದ್ದಾರೆ. * ಹಿಟ್ ಆ್ಯಂಡ್ ರನ್ ಕೇಸ್ನಲ್ಲಿ ಮೃತರ ಕುಟುಂಬಸ್ಥರಿಗೆ ತಕ್ಷಣವೇ 2 ಲಕ್ಷ ರೂ. ಪರಿಹಾರ ದೊರೆಯಲಿದೆ. ಕೆಲ ರಾಜ್ಯಗಳಲ್ಲಿ ಪ್ರಾಯೋಗಿಕವಾಗಿ ಈ ಯೋಜನೆ ಜಾರಿಗೆ ತರಲಾಗಿದೆ. ಮುಂದಿನ ದಿನಗಳಲ್ಲಿ ಎಲ್ಲಾ ರಾಜ್ಯಗಳಿಗೂ ಯೋಜನೆ ವಿಸ್ತರಣೆಯಾಗಲಿದೆ ಎಂದು ನಿತೀಶ್ ಗಡ್ಕರಿ ಅವರು ತಿಳಿಸಿದ್ದಾರೆ. * 2024 ರಲ್ಲಿ ರಸ್ತೆ ಅಪಘಾತಗಳಲ್ಲಿ 1.8 ಲಕ್ಷ ಜನರು ಮೃತಪಟ್ಟಿದ್ದಾರೆ. ಇವರಲ್ಲಿ 30 ಸಾವಿರ ಜನರು ಹೆಲೈಟ್ ಧರಿಸದ ಕಾರಣದಿಂದ ಮೃತಪಟ್ಟಿದ್ದಾರೆ. ಅಪಘಾತಗಳಲ್ಲಿ ಸಾವನ್ನಪ್ಪಿದವರಲ್ಲಿ ಶೇ. 66 ರಷ್ಟು ಜನರು 18-34 ವಯೋಮಾನದವರು. ಶಾಲೆ ಮತ್ತು ಕಾಲೇಜುಗಳ ಬಳಿ ಅವೈಜ್ಞಾನಿಕ ಆಗಮನ ಮತ್ತು ನಿರ್ಗಮನ ದ್ವಾರಗಳಿಂದಾಗಿ 10 ಸಾವಿರ ಮಕ್ಕಳು ಮೃತಪಟ್ಟಿದ್ದಾರೆ.* ವಾಹನಗಳ ಮೇಲೆ ರೆಟ್ರೊ-ರಿಫ್ಲೆಕ್ಟಿವ್ ಟೇಪ್ ಅನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದು ಮತ್ತು ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗಾಗಿ ವಾಹನ ಸ್ಥಳ ಟ್ರ್ಯಾಕಿಂಗ್ ಸಾಧನಗಳನ್ನು (VLTD) ಅಳವಡಿಸಲಾಗಿದೆ. ಮಾರ್ಚ್ 2025ರ ವೇಳೆಗೆ ಎಲ್ಲಾ ಮುಖರಹಿತ ಸೇವೆಗಳನ್ನು ದೇಶಾದ್ಯಂತ ಸಂಪೂರ್ಣವಾಗಿ ಸಂಯೋಜಿಸುವ ನಿರೀಕ್ಷೆಯಿದೆ.