* ಭಾರತೀಯ ಸಂವಿಧಾನದ ಮೂಲ ರಚನೆಯ ಸಿದ್ದಾಂತವನ್ನು ರೂಪಿಸಿದ ಐತಿಹಾಸಿಕ ಕೇಶವಾನಂದ ಭಾರತಿ ಪ್ರಕರಣದ ತೀರ್ಪು ಸುಪ್ರೀಂ ಕೋರ್ಟ್‌ನ ವೆಬ್‌ಸೈಟ್‌ನಲ್ಲಿ 10 ಭಾಷೆಗಳಲ್ಲಿ ಲಭ್ಯವಿದೆ ಎಂದು ಮುಖ್ಯ ನ್ಯಾಯಮೂರ್ತಿ(ಸಿಜೆಐ) ಡಿವೈ ಚಂದ್ರಚೂಡ್ ಅವರು ತಿಳಿಸಿದ್ದಾರೆ. * ಈ ಪ್ರಕರಣದ ತೀರ್ಪಿಗೆ 50 ವರ್ಷ ತುಂಬಿರುವ ಹಿನ್ನೆಲೆ ವಿವಿಧ ಭಾಷೆಗಳಲ್ಲಿ ಪ್ರಕಟಿಸಲಾಗಿದೆ  ಮುಖ್ಯ ನ್ಯಾಯಮೂರ್ತಿ ಹೇಳಿದ್ದಾರೆ.* ಕೇಶವಾನಂದ ಭಾರತಿ ಪ್ರಕರಣದ ಪ್ರಕರಣದ ಹಿನ್ನೆಲೆ, ಒಳಗೊಂಡಿರುವ ಪ್ರಮುಖ ಕಾನೂನು ಸಮಸ್ಯೆಗಳು, ಪೀಠದ ಅಧ್ಯಕ್ಷತೆ ವಹಿಸಿದ್ದ ನ್ಯಾಯಾಧೀಶರು, ಪ್ರಕರಣದಲ್ಲಿ ಹಾಜರಾದ ವಕೀಲರು, ಮಾಡಿದ ವಾದಗಳು ಮತ್ತು ತೀರ್ಮಾನಗಳ ವಿವರಗಳನ್ನು ಹತ್ತು ಭಾ‍ಷೆಗಳಲ್ಲಿ ನೀಡಲಾಗಿದೆ.* ಇಂಗ್ಲಿಷ್, ಹಿಂದಿ, ತೆಲುಗು, ತಮಿಳು, ಒಡಿಯಾ, ಮಲಯಾಳಂ, ಗುಜರಾತಿ, ಕನ್ನಡ, ಬೆಂಗಾಲಿ, ಅಸ್ಸಾಮಿ ಮತ್ತು ಮರಾಠಿಯಲ್ಲಿ ತೀರ್ಪನ್ನು ಅನುವಾದಿಸಲಾಗಿದೆ. * ಈ ಉಪಕ್ರಮವು ಸುಪ್ರೀಂ ಕೋರ್ಟ್‌ನ ತೀರ್ಪುಗಳನ್ನು ವಿವಿಧ ಭಾರತೀಯ ಭಾಷೆಗಳಿಗೆ ಭಾಷಾಂತರಿಸಲು ನಡೆಯುತ್ತಿರುವ ಪ್ರಯತ್ನದ ಭಾಗ ಎಂದು ಸಿಜೆಐ ಹೇಳಿದ್ದಾರೆ. 20,000 ತೀರ್ಪುಗಳನ್ನು ಈಗಾಗಲೇ ಸುಪ್ರೀಂ ಕೋರ್ಟ್ ವರದಿಗಳ ಎಲೆಕ್ಟ್ರಾನಿಕ್ ಆವೃತ್ತಿಯಲ್ಲಿ ತಿಳಿಸಲಾಗಿದೆ.