* ಸುಪ್ರೀಂಕೋರ್ಟ್ನ ಏಕೈಕ ಮಹಿಳಾ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರು ಐವರು ನ್ಯಾಯಮೂರ್ತಿಗಳನ್ನು ಒಳಗೊಂಡ ಕೊಲಿಜಿಯಂನ ಸದಸ್ಯರಾಗಿ ನೇಮಕಗೊಂಡಿದ್ದಾರೆ. ನ್ಯಾಯಮೂರ್ತಿ ಅಭಯ್ ಎಸ್ ಓಕಾ ನಿವೃತ್ತರಾದ ನಂತರ ಶನಿವಾರ (ಮೇ.24)ನಾಗರತ್ನ ಅವರು ಕೊಲಿಜಿಯಂನ ಭಾಗವಾದರು.* ಕೊಲಿಜಿಯಂನಲ್ಲಿ ಸಿಜೆಐ ಬಿ.ಆರ್.ಗವಾಯಿ, ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿ ವಿಕ್ರಮ್ ನಾಥ್, ನ್ಯಾಯಮೂರ್ತಿ ಜೆ.ಕೆ.ಮಾಹೇಶ್ವರಿ ಮತ್ತು ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರು ಇದ್ದಾರೆ. * ಕರ್ನಾಟಕದ ಮಂಡ್ಯ ಜಿಲ್ಲೆ ಪಾಂಡವಪುರದವರಾದ ಬಿ.ವಿ.ನಾಗರತ್ನ ಅವರು ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಆಗುವ ಸರದಿಯಲ್ಲಿದ್ದಾರೆ. 2027ರ ಸೆಪ್ಟೆಂಬರ್ 23ರಂದು ದೇಶದ ಮೊದಲ ಮಹಿಳಾ ಸಿಜೆಐ ಆಗಿ ಬಿ.ವಿ.ನಾಗರತ್ನ ಅವರ ಕಾರ್ಯಭಾರ ಆರಂಭವಾಗಲಿದೆ. ಅವರ ಸೇವಾವಧಿ 2027ರ ಅಕ್ಟೋಬರ್ 29ರಂದು ಕೊನೆಗೊಳ್ಳಲಿದೆ.* ಸುಪ್ರೀಂಕೋರ್ಟ್ನ ನಿವೃತ್ತ ಮುಖ್ಯನ್ಯಾಯಮೂರ್ತಿ ಇ.ಎಸ್. ವೆಂಕಟರಾಮಯ್ಯ ಅವರ ಪುತ್ರಿ. * 1984ರಲ್ಲಿ ದೆಹಲಿ ವಿಶ್ವವಿದ್ಯಾಲಯದ ಜೀಸಸ್ ಮತ್ತು ಮೇರಿ ಕಾಲೇಜಿನಲ್ಲಿ ಇತಿಹಾಸ ವಿಷಯದಲ್ಲಿ ಪದವಿ ಆನರ್ಸ್ ಪಡೆದಿದ್ದ ಬಿ.ವಿ.ನಾಗರತ್ನ ಅವರು, 1987ರಲ್ಲಿ ದೆಹಲಿ ವಿಶ್ವವಿದ್ಯಾಲಯದ ಕಾನೂನು ಕೇಂದ್ರದಲ್ಲೇ ಎಲ್ಎಲ್ಬಿ ಮುಗಿಸಿದರು. * 2008ರ ಫೆಬ್ರವರಿ 18ರಂದು ಕರ್ನಾಟಕ ಹೈಕೋರ್ಟ್ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು. 2010ರ ಫೆಬ್ರುವರಿ 17ರಂದು ಕಾಯಂ ನ್ಯಾಯಮೂರ್ತಿಯಾದರು. 2021ರ ಆಗಸ್ಟ್ 31ರಂದು ಬಿ.ವಿ.ನಾಗರತ್ನ ಅವರಿಗೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ಪದೋನ್ನತಿ ನೀಡಲಾಗಿತ್ತು.