* ಪಶ್ಚಿಮ ಘಟ್ಟದಲ್ಲಿ ಕಂಡುಬರುವ 'ಕುಂಬಾರ ಕಪ್ಪೆ' ಎಂಬ ನಿಶಾಚಾರಿ ಕಪ್ಪೆ ಕುರಿತ 'ಕಪ್ಪೆರಾಗ–ಕುಂಬಾರನ ಹಾಡು' ಎಂಬ ಕನ್ನಡ ಕಿರುಚಿತ್ರಕ್ಕೆ ಗ್ರೀನ್ ಆಸ್ಕರ್ ಎಂದೇ ಹೆಸರಾದ ಪ್ರತಿಷ್ಠಿತ 'ಜ್ಯಾಕ್ಸನ್ ವೈಲ್ಡ್ ಮೀಡಿಯಾ' ಪ್ರಶಸ್ತಿ ಲಭಿಸಿದೆ.* ನಿರ್ದೇಶಕ ಪ್ರಶಾಂತ್ ಎಸ್. ನಾಯಕ್ ಅವರು ನಿರ್ಮಾಣ ಮಾಡಿರುವ ಅತ್ಯುತ್ತಮ ಪ್ರಾಣಿ ವರ್ತನೆ ವಿಭಾಗದಲ್ಲಿ ಗ್ರೀನ್ ಆಸ್ಕರ್ ಪ್ರಶಸ್ತಿ ಲಭಿಸಿದೆ.* “ಕಿರುಚಿತ್ರವನ್ನು ಜಗತ್ತಿನಲ್ಲಿರುವ 8 ಕೋಟಿ ಕನ್ನಡ ಮಾತನಾಡುವ ಜನರಿಗೆ ಹಾಗೂ ಭಾರತದ 150 ಕೋಟಿ ಜನರಿಗೆ ಅರ್ಪಣೆ ಮಾಡಿದ್ದೇನೆ” ಎಂದು ನಿರ್ದೇಶಕ ಪ್ರಶಾಂತ್ ಎಸ್. ನಾಯಕ್ ಅವರು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಬರೆದುಕೊಂಡಿದ್ದಾರೆ.* “ಸಂಗೀತ, ಸಾಹಿತ್ಯ ಸೇರಿದಂತೆ ಅನಾದಿ ಕಾಲದಿಂದಲೂ ಸಾಂಸ್ಕೃತಿಕವಾಗಿ ಶ್ರೀಮಂತವಾಗಿರುವ ಕನ್ನಡ ನಾಡು ನಿಸರ್ಗದತ್ತವಾಗಿಯೂ ಸಂಪದ್ಭರಿತವಾಗಿದೆ. ಇಂಥ ನಾಡಿನ ಕನ್ನಡ ಚಿತ್ರಕ್ಕೆ ಇದೇ ಮೊದಲ ಬಾರಿಗೆ ಜ್ಯಾಕ್ಸನ್ ವೈಲ್ಡ್ ಮೀಡಿಯಾ ಪ್ರಶಸ್ತಿ ಲಭಿಸಿದೆ”.