* ಕರ್ನಾಟಕ ಸಾಹಿತ್ಯ ಅಕಾಡೆಮಿಯ 2022ರ ಸಾಲಿನ 'ವಾರ್ಷಿಕ ಗೌರವ ಪ್ರಶಸ್ತಿ, ಸಾಹಿತ್ಯ ಶ್ರೀ ಪ್ರಶಸ್ತಿ ಮತ್ತು 2021ನೇ ಸಾಲಿನ ಪುಸ್ತತ ಪ್ರಶಸ್ತಿಗಳು ಪ್ರಕಟಗೊಂಡಿದ್ದು, ಸಾಹಿತಿಗಳಾದ ಆರ್. ಕೆ. ಹುಡಗಿ, ಅಗ್ರಹಾರ ಕೃಷ್ಣಮೂರ್ತಿ, ಇಂದಿರಾ ಹೆಗ್ಗಡೆ, ರಂಜಾನ್‌ ದರ್ಗಾ ಹಾಗೂ ತುಂಬಾಡಿ ರಾಮಯ್ಯ ಸೇರಿದಂತೆ ಸಾಹಿತಿಗಳು ಪ್ರಶಸ್ತಿಗಳಿಗೆ ಆಯ್ಕೆಯಾಗಿದ್ದಾರೆ.* ಹಿರಿಯ ಸಾಹಿತಿ ರಂಜಾನ್ ದರ್ಗಾ ಸೇರಿ 5 ಮಂದಿ ಸಾಹಿತ್ಯ ಅಕಾಡಮಿ ಗೌರವ ಪ್ರಶಸ್ತಿ, 10 ಮಂದಿ ಸಾಹಿತ್ಯ ಶ್ರೀ ಪ್ರಶಸ್ತಿ, 17 ಜನರಿಗೆ 2021ನೆ ಪುಸ್ತಕ ಬಹುಮಾನ, 8 ಜನರಿಗೆ ದತ್ತಿ ಬಹುಮಾನ ಪುರಸ್ಕೃತರಾಗಿದ್ದಾರೆ.* ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನೀಡಿರುವ ಅಮೂಲ್ಯವಾದ ಸೇವೆಯನ್ನು ಪರಿಗಣಿಸಿ, 2022ನೇ ಸಾಲಿನ ಸಾಹಿತ್ಯ ಅಕಾಡಮಿ ಗೌರವ ಪ್ರಶಸ್ತಿಗೆ ಸಾಹಿತಿಗಳಾದ ಆರ್.ಕೆ.ಹುಡಗಿ, ಅಗ್ರಹಾರ ಕೃಷ್ಣಮೂರ್ತಿ, ಇಂದಿರಾ ಹೆಗಡೆ, ರಂಜಾನ್ ದರ್ಗಾ, ತುಂಬಾಡಿ ರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿದೆ. * ‘2022ರ ‘ಸಾಹಿತ್ಯ ಶ್ರೀ’ ಪ್ರಶಸ್ತಿಗೆ ಬಂಜಗೆರೆ ಜಯಪ್ರಕಾಶ್, ರೂಮಿ ಹರೀಶ್, ಎಂ.ಜಿ. ಮಂಜುನಾಥ, ದಾಸನೂರು ಕೂಸಣ್ಣ, ರಾಜಶೇಖರ ಹತಗುಂದಿ, ಎಚ್.ಎನ್.ಆರತಿ, ಸಾರಿಕಾದೇವಿ ಕಾಳಗಿ, ಮಹೇಶ್ ಹರವೆ, ಅನಸೂಯ ಕಾಂಬ್ಳೆ ಹಾಗೂ ಚಲಂ ಹಾಡ್ಲಹಳ್ಳಿ ಅವರನ್ನು ಆಯ್ಕೆ ಮಾಡಲಾಗಿದೆ. ಸಾಹಿತ್ಯ ಕ್ಷೇತ್ರದಿಂದ ಐವರು, ಸೃಜನೇತರ ಸಾಹಿತ್ಯ ಕ್ಷೇತ್ರದಿಂದ ನಾಲ್ವರು ಹಾಗೂ ಸಾಹಿತ್ಯ ಪರಿಚಾರಿಕೆಗೆ ಸಂಬಂಧಿಸಿದಂತೆ ಒಬ್ಬರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯು ತಲಾ ರೂ.25 ಸಾವಿರ ಬಹುಮಾನವನ್ನು ಒಳಗೊಂಡಿದೆ.* 2021ರ ಪುಸ್ತಕ ಬಹುಮಾನಕ್ಕೆ ವಿಮರ್ಶಕರ ಅಭಿಪ್ರಾಯ ಆಧರಿಸಿ 17 ಕೃತಿಗಳನ್ನು ಆಯ್ಕೆ ಮಾಡಲಾಗಿದೆ. ಈ ಬಹುಮಾನವು ತಲಾ ರೂ.25 ಸಾವಿರ ನಗದು ಬಹುಮಾನ ಒಳಗೊಂಡಿದೆ. * 2021ರ ವಿವಿಧ ದತ್ತಿ ಬಹುಮಾನಗಳಿಗೆ ಎಂಟು ಕೃತಿಗಳು ಆಯ್ಕೆಯಾಗಿವೆ. ಡಿಸೆಂಬರ್‌ನಲ್ಲಿ ಕಲ್ಯಾಣ ಕರ್ನಾಟಕ ಅಥವಾ ಉತ್ತರ ಕರ್ನಾಟಕ ಪ್ರದೇಶದಲ್ಲಿ ಸಮಾರಂಭ ನಡೆಯುವ ಸಾಧ್ಯತೆಗಳಿದ್ದು, ವಿಜೇತರಿಗೆ ಪ್ರಶಸ್ತಿಗಳನ್ನು ವಿತರಿಸಲಾಗುವುದು.* ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ 2021 & 2022 - ಸಾಹಿತ್ಯ ಶ್ರೀ ಪ್ರಶಸ್ತಿ (2022) : 10 ಲೇಖಕರು- ಸಾಹಿತ್ಯ ಅಕಾಡಮಿ ಗೌರವ ಪ್ರಶಸ್ತಿ (2022) : 5 ಲೇಖಕರು- ದತ್ತಿ ಬಹುಮಾನ (2021) : 8 ಲೇಖಕರು- ಪುಸ್ತಕ ಬಹುಮಾನ (2021) : 17 ಕೃತಿಗಳು