* ಕೇಂದ್ರ ಸಾಹಿತ್ಯ ಅಕಾಡೆಮಿಯ 2023ನೇ ಸಾಲಿನ ಪ್ರಶಸ್ತಿಗೆ ಹಿರಿಯ ಚಿಂತಕ, ಪ್ರಬಂಧ ವಿಭಾಗದಲ್ಲಿ ಕನ್ನಡದ ಹಿರಿಯ ಲೇಖಕ, ವಾಗ್ಮಿ ಲಕ್ಷ್ಮೀಶ ತೋಳ್ಪಾಡಿ ಅವರು ಆಯ್ಕೆಯಾಗಿದ್ದಾರೆ. * ಲಕ್ಷ್ಮೀಶ ತೋಳ್ಪಾಡಿ ಅವರ ಕೃತಿ 'ಮಹಾಭಾರತ ಅನುಸಂಧಾನದ ಭಾರತಯಾತ್ರೆ' ಕೃತಿಗೆ ಈ ಪ್ರಶಸ್ತಿ ಲಭಿಸಿದೆ. ಈ ಪ್ರಶಸ್ತಿಯು ₹1 ಲಕ್ಷ ನಗದು ಹಾಗೂ ಪ್ರಶಸ್ತಿಪತ್ರ ಒಳಗೊಂಡಿದೆ.* ಲಕ್ಷ್ಮೀಶ ತೋಳ್ಪಾಡಿ ಅವರಿಗೆ ನವದೆಹಲಿಯಲ್ಲಿ 2024 ಮಾರ್ಚ್‌ 12ರಂದು ನಡೆಯುವ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.* ಲಕ್ಷ್ಮೀಶ ತೋಳ್ಪಾಡಿ ಅವರು ಸೇರಿದಂತೆ 24 ಭಾಷೆಗಳ ಲೇಖಕರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಾಹಿತ್ಯ ಅಕಾಡೆಮಿ ತಿಳಿಸಿದೆ.* ಸಾಹಿತ್ಯ ಅಕಾಡೆಮಿ ವಾರ್ಷಿಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳನ್ನು 24 ಭಾಷೆಗಳಲ್ಲಿ 2023 ಡಿಸೆಂಬರ್.20 ರಂದು ಪ್ರಕಟಿಸಿದ್ದು, ಇದರಲ್ಲಿ 9 ಕವನಗಳು, 6 ಕಾದಂಬರಿಗಳು, 5 ಸಣ್ಣ ಕಥೆಗಳು, 3 ಪ್ರಬಂಧಗಳು ಮತ್ತು 1 ಸಾಹಿತ್ಯ ಅಧ್ಯಯನಗಳು 2023ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳನ್ನು ಗೆದ್ದಿವೆ.