* ಕೊಚ್ಚಿ ಬಳಿಕ ಮಂಗಳೂರಿನಲ್ಲಿ ವಾಟರ್ ಮೆಟ್ರೋ ಆರಂಭಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ 10ನೇ ಕರ್ನಾಟಕ ಜಲಸಾರಿಗೆ ಮಂಡಳಿ ಸಭೆಯಲ್ಲಿ ಮಂಗಳೂರಿನಲ್ಲಿ ವಾಟರ್ ಮೆಟ್ರೋ ಆರಂಭಿಸಲು ಅನುಮೋದನೆ ನೀಡಲಾಗಿದೆ.* ವಾಟರ್ ಮೆಟ್ರೋ ಯೋಜನೆಯು ಖಾಸಗಿ ಸಹಭಾಗಿತ್ವದ ಯೋಜನೆಯಾಗಿದೆ. ಮಂಗಳೂರು ಪೋರ್ಟ್ ನಿಂದ ಉಳ್ಳಾಲದವರೆಗೆ ಅಂದಾಜು 15 ಕಿ.ಮೀ. ವ್ಯಾಪ್ತಿಯಲ್ಲಿ ಸಂಚರಿಸಲಿದೆ. * ಅಲ್ಲದೆ, ಅಂದಾಜು 1,600 ಕೋಟಿ ರೂ. ವೆಚ್ಚದಲ್ಲಿ ಮಂಗಳೂರು ಅಂತಾರಾಷ್ಟ್ರೀಯ ನೌಕಾ ಪ್ರವಾಸೋದ್ಯಮ (ಕ್ರೂಜ್ ಟೂರಿಸಂ) ಅಭಿವೃದ್ಧಿಗೂ ಜಲಸಾರಿಗೆ ಮಂಡಳಿ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. * ಮಂಗಳೂರು ಬಂದರಿನ ಹೂಳೆತ್ತುವ ಕಾಮಗಾರಿ ಕೈಗೆತ್ತಿಕೊಳ್ಳಲು ಸಭೆಯಲ್ಲಿ ಅನುಮತಿ ಸಿಕ್ಕಿದೆ. 31 ಕೋಟಿ ರೂ. ವೆಚ್ಚದಲ್ಲಿ ಹೂಳೆತ್ತುವ ಕಾರ್ಯ ನಡೆಯಲಿದೆ.