* ಕಾನೂನು ಸೇವಾ ಪ್ರಾಧಿಕಾರಗಳ ಕಾಯಿದೆ 1987 ಕಾಜಾರಿಗೊಂಡ ದಿನದ ಸ್ಮರಣಾರ್ಥವಾಗಿ ಪ್ರತಿವರ್ಷ ನವೆಂಬರ್ 9ರಂದು ರಾಷ್ಟ್ರೀಯ ಕಾನೂನು ಸೇವೆಗಳ ದಿನವನ್ನು ಆಚರಿಸಲಾಗುತ್ತದೆ.* ಪ್ರತಿವರ್ಷ ಒಂದೊಂದು ಧೈಯವಾಕ್ಯದಡಿ ರಾಷ್ಟ್ರೀಯ ಕಾನೂನು ಸೇವಾ ದಿನವನ್ನು ಆಚರಿಸಲಾಗುತ್ತದೆ. ಈ ವರ್ಷ 'ದೃಢವಾದ ನ್ಯಾಯ: ಎಲ್ಲರಿಗೂ ಕೈಗೆಟಕುವ ಕಾನೂನು (Empowering Justice: Accessible Legal Aid for All) ಎಂಬ ಧೈಯವಾಕ್ಯದಡಿ ಈ ದಿನವನ್ನು ಸಂಭ್ರಮಿಸಲಾಗುತ್ತದೆ.* ಸುಪ್ರೀಂ ನ್ಯಾಯಮೂರ್ತಿ ಆರ್.ಎನ್.ಮಿಶ್ರಾ ಅವರು 1995ರ ಡಿಸೆಂಬರ್ 5ರಂದು ಕಾನೂನು ಸೇವೆಗಳ ಪ್ರಾಧಿಕಾರವನ್ನು ಜಾರಿಗೆ ತಂದರು. ಈ ಪ್ರಾಧಿಕಾರವು ಅಗತ್ಯವಿರುವವರಿಗೆ ಉಚಿತ ಕಾನೂನು ನೆರವು, ಮಾರ್ಗದರ್ಶನವನ್ನು ನೀಡುವ ಮತ್ತು ಮಧ್ಯಸ್ಥಿಕೆ ಹಾಗೂ ಸೌಹಾರ್ದಯುತವಾಗಿ ಇತ್ಯರ್ಥಗೊಳಿಸುವ ಮೂಲಕ ಸಮಸ್ಯೆಗಳನ್ನು ಪರಿಹರಿಸುವ ಕಾರ್ಯ ಮಾಡುತ್ತದೆ. * ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಉಚಿತ ಕಾನೂನು ಸಲಹೆ ನೀಡಲಾಗುತ್ತದೆ. ಆದರೆ, ಉಚಿತ ಕಾನೂನು ನೆರವು ಎಲ್ಲರಿಗೂ ಸಿಗುವುದಿಲ್ಲ. ಕಾನೂನು ಸೇವೆಗಳ ಪ್ರಾಧಿಕಾರ ಕಾಯಿದೆಯ ಸೆಕ್ಷನ್ 12ರಲ್ಲಿ ಉಲ್ಲೇಖಿಸಿರುವಂತೆ ಮಹಿಳೆಯರು ಮತ್ತು ಮಕ್ಕಳು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು, ಅಂಗವಿಕಲರು, ಕಾರ್ಮಿಕ ವರ್ಗ, ಮಾನವ ಕಳ್ಳಸಾಗಣೆಗೆ ಒಳಗಾದವರು, ಕಾರ್ಮಿಕ ವರ್ಗ, ಕಸ್ಟಡಿಯಲ್ಲಿರುವ ಆರೋಪಿ, ಪ್ರಾಕೃತಿಕ ವಿಕೋಪಕ್ಕೆ ತುತ್ತಾದವರು, ವಾರ್ಷಿಕ 3 ಲಕ್ಷಕ್ಕೂ ಕಡಿಮೆ ಆದಾಯ ಇರುವ ವ್ಯಕ್ತಿಗಳಿಗೆ ಉಚಿತ ಕಾನೂನು ನೆರವು ಒದಗಿಸಲಾಗುತ್ತದೆ. ನ್ಯಾಯಾಲಯದ ಪ್ರಕರಣಗಳಲ್ಲಿ ಪ್ರಾಧಿ ಕಾರದ ವತಿಯಿಂದಲೇ ವಕೀಲರನ್ನೂ ನೇಮಿಸಲಾಗುತ್ತದೆ.* ವ್ಯಕ್ತಿ ಬಡವನಾಗಿರಲಿ, ವಿಶೇಷಚೇತನರಾಗಿರಲಿ ಸಮಾಜದ ದುರ್ಬಲ ವರ್ಗದವನಾಗಿರಲಿ ಎಲ್ಲರಿಗೂ ನ್ಯಾಯ ಪಡೆಯುವ ಸಮಾನ ಅವಕಾಶವಿದೆ. ಅವರಿಗೆ ನ್ಯಾಯ ಸಿಗುವಂತೆ ನೋಡಿಕೊಳ್ಳಲು ಉಚಿತ ಕಾನೂನು ನೆರವು ಮತ್ತು ಉಚಿತ ಸಮಲೋಚನೆಯನ್ನು ನೀಡಲಾಗುತ್ತದೆ. ಹೀಗೆ ಜನರಿಗೆ ನ್ಯಾಯ ಪಡೆಯುವ ಹಕ್ಕಿನ ಬಗ್ಗೆ ಅರಿವು ಮೂಡಿಸಲು ರಾಷ್ಟ್ರೀಯ ಕಾನೂನು ಸೇವೆಗಳ ದಿನವನ್ನು ಆಚರಿಸಲಾಗುತ್ತದೆ.