* ಒಂದು ರಾಷ್ಟ್ರ, ಒಂದು ಚುನಾವಣೆಗೆ ಸಂಬಂಧಿಸಿದಂತೆ ಮಾಜಿ ರಾಷ್ಟ್ರಪತಿ ರಮಾನಾಥ್ ಕೊವಿಂದ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿಯು ಮಾರ್ಚ್ 14 ರಂದು 18,626 ಪುಟಗಳ ವರದಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಲಾಗಿದೆ.* ಈ ಸಮಿತಿಯು ದೇಶಾದ್ಯಂತ ಏಕಕಾಲಕ್ಕೆ ಹಲವು ಹಂತದ ಚುನಾವಣೆಗಳನ್ನು ನಡೆಸುವ ಪರಿಕಲ್ಪನೆಗೆ ತನ್ನ ವರದಿಯಲ್ಲಿ ಸಮ್ಮತಿ ಸೂಚಿಸಿದೆ ಎನ್ನಲಾಗಿದೆ. * ಪ್ರಸ್ತಾವಿತ ವರದಿಯು ಲೋಕಸಭೆ, ರಾಜ್ಯ ವಿಧಾನಸಭೆ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸಲು ಏಕ ಮತದಾರರ ಪಟ್ಟಿಯನ್ನು ಹೊಂದಲು ಕೇಂದ್ರೀಕರಿಸುತ್ತದೆ ಎಂದು ಹೇಳಲಾಗುತ್ತಿದೆ.* 2023 ಸೆಪ್ಟೆಂಬರ್‌ನಲ್ಲಿ ರಚಿಸಲಾದ ಸಮಿತಿಯು ಲೋಕಸಭೆ, ರಾಜ್ಯ ವಿಧಾನಸಭೆಗಳು, ಪುರಸಭೆಗಳು ಮತ್ತು ಪಂಚಾಯತ್‌ಗಳಿಗೆ ಅಸ್ತಿತ್ವದಲ್ಲಿರುವ ಸಾಂವಿಧಾನಿಕ ಚೌಕಟ್ಟನ್ನು ಗಮನದಲ್ಲಿಟ್ಟುಕೊಂಡು ಏಕಕಾಲದಲ್ಲಿ ಚುನಾವಣೆಗಳನ್ನು ಪರಿಶೀಲಿಸುವ ಮತ್ತು ಶಿಫಾರಸು ಮಾಡುವ ಜವಾಬ್ದಾರಿಯನ್ನು ವಹಿಸಿಕೊಂಡಿತ್ತು.