* 2013ರಿಂದ 2023ರ ನಡುವೆ ಪಶ್ಚಿಮ ಘಟ್ಟದ ಸೆರಗಿನಲ್ಲಿರುವ ರಾಜ್ಯದ ಆರು ಜಿಲ್ಲೆಗಳಲ್ಲಿ 153.80 ಚದರ ಕಿ.ಮೀ.ನಷ್ಟು ಅರಣ್ಯ ಪ್ರದೇಶ ನಾಶವಾಗಿದೆ.* 'ಭಾರತೀಯ ಅರಣ್ಯ ಸ್ಥಿತಿಗತಿ ವರದಿ-2023'ರಲ್ಲಿ ಈ ಮಾಹಿತಿಯನ್ನು ಕೇಂದ್ರ ಸರ್ಕಾರವು ಇತ್ತೀಚಿಗೆ ಬಿಡುಗಡೆ ಮಾಡಿದೆ.* ಹೆಚ್ಚು ಅರಣ್ಯ ನಾಶವಾದ ಜಿಲ್ಲೆಗಳಲ್ಲಿ ಶಿವಮೊಗ್ಗ ಜಿಲ್ಲೆ ಮೊದಲ ಸ್ಥಾನದಲ್ಲಿದೆ. ಜಿಲ್ಲೆಯಲ್ಲಿ ಒಟ್ಟು 74.54 ಚದರ ಕಿ.ಮೀ, ಕೊಡಗಿನಲ್ಲಿ 33.40 ಚದರ ಕಿ.ಮೀ., ಬೆಳಗಾವಿಯಲ್ಲಿ 24.91 ಚದರ ಕಿ.ಮೀ. ಮತ್ತು ಮೈಸೂರಿನಲ್ಲಿ 15.28 ಚದರ ಕಿ.ಮೀ.ನಷ್ಟು ಅರಣ್ಯ ನಾಶವಾಗಿದೆ.* ಹಾಸನ ಮತ್ತು ಚಾಮರಾಜನಗರದಲ್ಲಿ ಅರಣ್ಯದ ವಿಸ್ತೀರ್ಣ ಸ್ವಲ್ಪ ಕುಸಿದಿದೆ. ಇನ್ನೂ ಜಿಲ್ಲೆಗಳಲ್ಲಿ 'ಅತಿದಟ್ಟಾರಣ್ಯ'ದ ವ್ಯಾಪ್ತಿ ಹತ್ತು ವರ್ಷಗಳಲ್ಲಿ ಹೆಚ್ಚಾಗಿದೆ. ಆದರೆ 'ದಟ್ಟಾರಣ್ಯ'ದ ವ್ಯಾಪ್ತಿ ಸ್ವಲ್ಪ ಕುಸಿದಿದೆ.* ಪಶ್ಚಿಮ ಘಟ್ಟದ ಅಂಚಿನಲ್ಲಿರುವ 'ಸಾಧಾರಣ ಅರಣ್ಯ'ವು ಜನವಸತಿ ಮತ್ತು ವಾಣಿಜ್ಯ ಬೆಳೆ ಚಟುವಟಿಕೆ ಪ್ರದೇಶಗಳಿಗೆ ಹೊಂದಿಕೊಂಡಿದ್ದು, ಅತಿಹೆಚ್ಚು ಅರಣ್ಯ ನಾಶವಾಗಿದೆ.* ಮರಗಳ ಹಸಿರಿನ ಹೊದಿಕೆ ಶೇ. 10ರಿಂದ ಶೇ40ರಷ್ಟು ಇರುವ ಕಾಡನ್ನು ಮತ್ತು ಪಶ್ಚಿಮ ಘಟ್ಟದ ಶೋಲಾ ಕಾಡುಗಳನ್ನು 'ಸಾಧಾರಣ ಅರಣ್ಯ' ಎಂದು ವರ್ಗೀಕರಿಸಲಾಗಿದೆ.* ವಾಣಿಜ್ಯ ಬೆಳೆ ಪ್ರದೇಶಗಳಿಗೆ ಹೊಂದಿಕೊಂಡಿರುವ ಈ ಅರಣ್ಯ ಪ್ರದೇಶಗಳಿಗೆ ಆಕ್ರಮಣಕಾರಿ ಸಸ್ಯಪ್ರಬೇಧಗಳು ದಾಟಿಕೊಂಡಿವೆ. ಇದರಿಂದ ಸ್ಥಳೀಯ ಅರಣ್ಯ ಸಸಿ, ಮರ, ಹುಲ್ಲು ಪ್ರಬೇಧಗಳಿಗೆ ಮತ್ತು ವನ್ಯಜೀವಿಗಳಿಗೆ ಸಂಕಷ್ಟ ಎದುರಾಗಿದೆ.