* ಭರತನಾಟ್ಯ ಮತ್ತು ಕೂಚುಪುಡಿಯ ಹೆಸರಾಂತ ಕಲಾವಿದೆ, ಪದ್ಮ ಪ್ರಶಸ್ತಿ ಪುರಸ್ಕೃತೆ ಯಾಮಿನಿ ಕೃಷ್ಣಮೂರ್ತಿ ನಿಧನರಾಗಿದ್ದಾರೆ. 84 ವಯಸ್ಸಿನ ಯಾಮಿನಿ ಅವರು ದೆಹಲಿಯ ಅಪೋಲೋ ಆಸ್ಪತ್ರೆಯಲ್ಲಿ ಆಗಸ್ಟ್ 3 ರಂದು ಕೊನೆಯುಸಿರೆಳೆದಿದ್ದಾರೆ. * ಯಾಮಿನಿ ಕೃಷ್ಣಮೂರ್ತಿ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದು, ಕಳೆದ 7 ತಿಂಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಅವರ ಮ್ಯಾನೇಜರ್ ಹಾಗೂ ಕಾರ್ಯದರ್ಶಿಯಾಗಿದ್ದ ಗಣೇಶ್ ಮಾಹಿತಿ ನೀಡಿದ್ದಾರೆ.* ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಮದನಪಲ್ಲಿಯಲ್ಲಿ 1940ರ ಡಿಸೆಂಬರ್‌ 20ರಂದು ಅವರು ಜನಿಸಿದ್ದರು. ಸಂಸ್ಕೃತ ವಿದ್ವಾಂಸ ಎಂ. ಕೃಷ್ಣಮೂರ್ತಿ ಅವರ ತಂದೆ. ಅವರು ಐದನೇ ವಯಸ್ಸಿನಿಂದಲೇ ಭರತನಾಟ್ಯ ಕಲಿಕೆಯಲ್ಲಿ ತೊಡಗಿದ್ದರು.* ಯಾಮಿನಿ ಅವರು 28ನೇ ವಯಸ್ಸಿನಲ್ಲಿದ್ದಾಗಲೇ 1968ರಲ್ಲಿ ‘ಪದ್ಮಶ್ರೀ’ ಪ್ರಶಸ್ತಿ ಪುರಸ್ಕೃತರಾಗಿದ್ದರು. 2001ರಲ್ಲಿ ಪದ್ಮಭೂಷಣ, 2016ರಲ್ಲಿ ಪದ್ಮವಿಭೂಷಣ ಪ್ರಶಸ್ತಿಗಳು ಅವರಿಗೆ ಸಂದಿವೆ. 1977ರಲ್ಲಿ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿಗೆ ಅವರು ಭಾಜನರಾಗಿದ್ದರು.