* ಕರ್ನಾಟಕವು ದೇಶಾದ್ಯಾಂತ ಪಂಚಾಯತ್ ರಾಜ್ . ಸೂಚ್ಯಂಕದಲ್ಲಿ ಮೊದಲ ಸ್ಥಾನವನ್ನು ಪಡೆದಿದ್ದು, ಹಳ್ಳಿಗಳ ಸಬಲೀಕರಣಕ್ಕಾಗಿ ವಿವಿಧ ಪ್ರಗತಿಪರ ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ.'* ಹಣಕಾಸು, ಉತ್ತರದಾಯಿತ್ವ, ಆರ್ಥಿಕ ವಿಕೇಂದ್ರೀಕರಣ, ಅನುದಾನ ಬಿಡುಗಡೆ, 15ನೇ ಹಣಕಾಸು ಆಯೋಗದ ಅನುದಾನ ಬಳಕೆ, ಗ್ರಾಮಸಭೆ ಮತ್ತು ಸಾಮಾಜಿಕ ಆಡಿಟ್ ಕ್ಷೇತ್ರಗಳಲ್ಲಿ ಉತ್ತಮ ಸಾಧನೆಗಳನ್ನು ತಲುಪಲಾಗಿದೆ.* ಪ್ರೊ. ಎಸ್.ಪಿ. ಸಿಂಗ್ ಬಘೇಲ್, ಪಂಚಾಯತ್ ರಾಜ್ ಮತ್ತು ಮೀನುಗಾರಿಕೆ, ಪಶುಸಂಗೋಪನೆ ಹಾಗೂ ಹೈನುಗಾರಿಕೆ ಸಚಿವಾಲಯದ ರಾಜ್ಯ ಸಚಿವ, ‘ರಾಜ್ಯಗಳಲ್ಲಿ ಪಂಚಾಯತಗಳಿಗೆ ಅಧಿಕಾರ ವಿಕೇಂದ್ರೀಕರಣದ ಸ್ಥಿತಿ-ಸೂಚ್ಯಂಕ ಸಾಕ್ಷ್ಯಾಧಾರಿತ ಶ್ರೇಯಾಂಕ’ ಎಂಬ ವರದಿಯನ್ನು ದೆಹಲಿಯಲ್ಲಿ ಭಾನುವಾರ(ಫೆ.16) ಬಿಡುಗಡೆ ಮಾಡಿದ್ದಾರೆ.* ಪಂಚಾಯತ್ ವಿಕೇಂದ್ರೀಕರಣ ಸೂಚ್ಯಂಕದಲ್ಲಿ ಕರ್ನಾಟಕ ಮೊಟ್ಟ ಮೊದಲ ಸ್ಥಾನ ಪಡೆದಿದ್ದು, ಕೇರಳ ದ್ವಿತೀಯ, ತಮಿಳುನಾಡು ತೃತೀಯ, ಮಹಾರಾಷ್ಟ್ರ ನಾಲ್ಕನೆ ಹಾಗೂ ಉತ್ತರ ಪ್ರದೇಶ ಐದನೇ ಸ್ಥಾನವನ್ನು ಗಳಿಸಿದೆ. ಶ್ರೇಯಾಂಕಗಳು ವಿಕೇಂದ್ರೀಕರಣದ ಚೌಕಟ್ಟು, ಕಾರ್ಯಗಳು, ಹಣಕಾಸು, ಕಾರ್ಯಕರ್ತರು, ಸಾಮರ್ಥ್ಯ ವೃದ್ಧಿ ಹಾಗೂ ಉತ್ತರದಾಯಿತ್ವ ಅಂಶಗಳ ಮೇಲೆ ಆಧಾರಿತವಾಗಿವೆ.* ಕಾರ್ಯನಿರ್ವಹಣೆ ವಿಕೇಂದ್ರೀಕರಣದಲ್ಲಿ ತಮಿಳುನಾಡು ಮೊದಲ ಸ್ಥಾನ, ನಂತರ ಕರ್ನಾಟಕ, ಒಡಿಶಾ, ಕೇರಳ, ರಾಜಸ್ಥಾನ ಮತ್ತು ಉತ್ತರಪ್ರದೇಶ ಕ್ರಮವಾಗಿ 2 ರಿಂದ 5ನೇ ಸ್ಥಾನಗಳನ್ನು ಪಡೆದಿವೆ. ಹಣಕಾಸು ನಿರ್ವಹಣೆಯಲ್ಲಿ ಕರ್ನಾಟಕ ಮುಂಚಿತವಾಗಿದ್ದು, ಕೇರಳ, ತ್ರಿಪುರ ಮತ್ತು ತಮಿಳುನಾಡು ಕ್ರಮವಾಗಿ 2, 3 ಮತ್ತು 4ನೇ ಸ್ಥಾನಗಳಲ್ಲಿ ಸೇರಿವೆ.* ಸಿಬ್ಬಂದಿ ನಿರ್ವಹಣೆ ಮತ್ತು ಸಾಮರ್ಥ್ಯವರ್ಧನೆಯಲ್ಲಿ ಗುಜರಾತ್ ಮೊದಲು ಬಂದಿದ್ದು, ತಮಿಳುನಾಡು, ಕೇರಳ ಮತ್ತು ಕರ್ನಾಟಕ ಕ್ರಮವಾಗಿ 2, 3 ಮತ್ತು 4ನೇ ಸ್ಥಾನಗಳನ್ನು ಗಳಿಸಿವೆ. ಆದರೆ ಸಾಂಸ್ಥಿಕ ವರ್ಧನೆಯಲ್ಲಿ ಕರ್ನಾಟಕ 11ನೇ ಸ್ಥಾನಕ್ಕೆ ಕುಸಿತವಾಗಿದೆ. ತೆಲಂಗಾಣ, ತಮಿಳುನಾಡು ಮತ್ತು ಗುಜರಾತ್ ಕ್ರಮವಾಗಿ 1, 2 ಮತ್ತು 3ನೇ ಸ್ಥಾನದಲ್ಲಿದೆ.