* ಭಾರತೀಯ ಮೂಲದ ಅಮೆರಿಕಾ ವಿಜ್ಞಾನಿ ಮತ್ತು ಸುಧಾಮೂರ್ತಿ ಅವರ ಸಹೋದರ, ಖಗೋಳಶಾಸ್ತ್ರ ಪ್ರೊಫೆಸರ್ ಶ್ರೀನಿವಾಸ್ ಆರ್ ಕುಲಕರ್ಣಿ ಅವರು ಖಗೋಳಶಾಸ್ತ್ರ ವಿಭಾಗದ ಸಾಧಕರಿಗೆ ನೀಡಲಾಗುವ 2024ರ ಪ್ರತಿಷ್ಠಿತ ‘ಶಾ ಪ್ರಶಸ್ತಿಗೆ ಭಾಜನರಾಗಿದ್ದಾರೆ.* ಮಿಲಿಸೆಕೆಂಡ್ ಪಲ್ಸರ್‌ಗಳು, ಗಾಮಾ-ರೇ ಸ್ಫೋಟಗಳು, ಸೂಪರ್‌ ನೋವಾಗಳು ಮತ್ತು ಬದಲಾಗುತ್ತಿರುವ ಬಾಹ್ಯಾಕಾಶ ಘಟನೆಗಳ ಅಧ್ಯಯನ ಮಡಿದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಶ್ರೀನಿವಾಸ್ ಆರ್ ಕುಲಕರ್ಣಿ ಅವರು ಪಾತ್ರರಾಗಿದ್ದಾರೆ.* ಶ್ರೀನಿವಾಸ್ ಆರ್. ಕುಲಕರ್ಣಿ ಅವರು ಭಾರತೀಯರು, ಅದಕ್ಕಿಂತಲೂ ಹೆಚ್ಚಾಗಿ ಕನ್ನಡಿಗರು. ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿಯಲ್ಲಿ ಕುರುಂದ್ವಾಡ್ ಎಂಬ ಪುಟ್ಟ ಪಟ್ಟಣವಿದೆ. ಮಹಾರಾಷ್ಟ್ರ ರಾಜ್ಯಕ್ಕೆ ಸೇರಿದ ಈ ಪಟ್ಟಣದಲ್ಲಿ 1955ರಲ್ಲಿ ಜನಿಸಿದ ಶ್ರೀನಿವಾಸ್ ಆರ್. ಕುಲಕರ್ಣಿ ಅವರು ಬೆಳವಣಿಗೆ ಕಂಡು ಪ್ರವರ್ಧಮಾನಕ್ಕೆ ಬಂದಿದ್ದು ಕರ್ನಾಟಕದ ಹುಬ್ಬಳ್ಳಿಯಲ್ಲಿ. ಕೇಂದ್ರೀಯ ವಿದ್ಯಾಲಯದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಪಡೆದ ಶ್ರೀನಿವಾಸ್ ಆರ್. ಕುಲಕರ್ಣಿ, 1978ರಲ್ಲಿ ದೆಹಲಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಎಂಎಸ್‌ ವ್ಯಾಸಂಗ ಮಾಡಿದರು. ಬಳಿಕ 1983ರಲ್ಲಿ ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಪಿಎಚ್‌ಡಿ ಸಂಶೋಧನೆ ಮಾಡಿದರು. ಪ್ರಸ್ತುತ ಕ್ಯಾಲಿಫೋರ್ನಿಯಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಖಗೋಳ ಶಾಸ್ತ್ರದ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.* 2002 ರಲ್ಲಿ, ಹಾಂಗ್ ಕಾಂಗ್ ಲೋಕೋಪಕಾರಿ ರನ್ ರನ್ ಶಾ ಅವರು ಶಾ ಪ್ರಶಸ್ತಿಯನ್ನು ಸ್ಥಾಪಿಸಿದರು, ಅಂತರರಾಷ್ಟ್ರೀಯ ಪ್ರಶಸ್ತಿಯಾಗಿದೆ. ಖಗೋಳಶಾಸ್ತ್ರ, ಜೀವ ವಿಜ್ಞಾನ ಮತ್ತು ವೈದ್ಯಕೀಯ, ಮತ್ತು ಗಣಿತ ವಿಜ್ಞಾನಗಳಲ್ಲಿ ಪ್ರಮುಖ ಸಾಧನೆಗಳನ್ನು ಮಾಡಿದ ವ್ಯಕ್ತಿಗಳಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಈ ಪ್ರಶಸ್ತಿಯ ಮೊತ್ತವು USD 1.2 ಮಿಲಿಯನ್ ಆಗಿದೆ.