* ಹನ್ನೆರಡನೇ ಶತಮಾನದಲ್ಲಿ ಕಾಯಕ ಜೀವಿಗಳ ಚಳುವಳಿಯ ಮೂಲಕ ಸಾಮಾಜಿಕ ಕ್ರಾಂತಿಯನ್ನೇ ನಡೆಸಿ ವಚನಗಳ ಮೂಲಕ ಜಾಗೃತಿ ಮೂಡಿಸಿದ ಬಸವೇಶ್ವರರನ್ನು 'ಕರ್ನಾಟಕದ ಸಾಂಸ್ಕೃತಿಕ ನಾಯಕ' ಎಂದು ರಾಜ್ಯ ಸರ್ಕಾರ ಘೋಷಿಸಿದೆ.* ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಜನವರಿ 18 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಬಸವಣ್ಣ ಅವರಿಗೆ 'ಸಾಂಸ್ಕೃತಿಕ ನಾಯಕ' ಸ್ಥಾನಮಾನ ನೀಡುವ ಪ್ರಸ್ತಾವನೆಗೆ ಸರ್ವಾನುಮತದಿಂದ ಒಪ್ಪಿಗೆ ನೀಡಲಾಗಿದೆ. * 'ಈ ಘೋಷಣೆಯ ಬಳಿಕ ಬಸವಣ್ಣ ಅವರ ತತ್ವ ಆದರ್ಶಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಪ್ರಸಾರ ಮಾಡಲಾಗುವುದು. 600 ಕೋಟಿ ವೆಚ್ಚದಲ್ಲಿ ಅನುಭವ ಮಂಟಪ ನಿರ್ಮಾಣ ಕಾರ್ಯ ನಡೆಯುತ್ತಿದ್ದು ಅದನ್ನು 2025ಕ್ಕೆ ಪೂರ್ಣಗೊಳಿಸಲಾಗುವುದು' ಎಂದು ಸಚಿವ ಈಶ್ವರ ಖಂಡ್ರೆ ಅವರು ತಿಳಿಸಿದರು.* ರಾಜಕೀಯ, ಸಾಮಾಜಿಕ, ಆರ್ಥಿಕ ಹಾಗೂ ತಾತ್ವಿಕ, ಮೌಲ್ಯಗಳನ್ನೂ ಬಸವಣ್ಣ ಪ್ರತಿಪಾದಿಸಿದ್ದರು. ಅವರು ವಿಶ್ವ ಶ್ರೇಷ್ಠ ಮೌಲ್ಯಗಳನ್ನು ಪ್ರತಿಪಾದಿಸಿದ್ದ ಮಹಾನ್ ವ್ಯಕ್ತಿ ಆಗಿರುವುದರಿಂದ ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಲು ತೀರ್ಮಾನಿಸಲಾಯಿತು. - ಅಲ್ಲಮ ಪ್ರಭು ಉದ್ಯಾನ:* ಶಿವಮೊಗ್ಗ ನಗರದ ಹಳೆ ಜೈಲು ಅವರಣದಲ್ಲಿ ಸಾರ್ವಜನಿಕ ಉದ್ದೇಶಕ್ಕೆ ಕಾಯ್ದಿರಿಸಿದ ಪ್ರದೇಶವನ್ನು 'ಅಲ್ಲಮ ಪ್ರಭು ಉದ್ಯಾನವನ' ಎಂದು ನಾಮಕರಣ ಮಾಡಲು ತೀರ್ಮಾನಿಸಲಾಗಿದೆ. ಅಲ್ಲಮಪ್ರಭು ಅದೇ ಜಿಲ್ಲೆಯ ಬಳ್ಳಿಗಾವಿಯಲ್ಲಿ ಜನಿಸಿದವರು. ಅವರ ನೆನಪು ಸದಾ ಉಳಿಯಲು ಉದ್ಯಾನಕ್ಕೆ 'ಅಲ್ಲಮ ಪ್ರಭು ಉದ್ಯಾನವನ' ಎಂದು ನಾಮಕರಣ ಮಾಡಲು ತೀರ್ಮಾನಿಸಲಾಯಿತು ಎಂದು ಎಚ್.ಕೆ.ಪಾಟೀಲ ಅವರು ತಿಳಿಸಿದರು.- ಚನ್ನಮ್ಮನ ಕಿತ್ತೂರು:* ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲ್ಲೂಕನ್ನು 'ಚನ್ನಮ್ಮನ ಕಿತ್ತೂರು ತಾಲ್ಲೂಕು' ಎಂದು ನಾಮಕರಣ ಮಾಡಲು ಸಂಪುಟ ಸಭೆ ಒಪ್ಪಿಗೆ ನೀಡಿದೆ. ಬ್ರಿಟಿಷರ ವಿರುದ್ಧ ಹೋರಾಟ ನಡೆಸಿದ್ದ ಕಿತ್ತೂರು ರಾಣಿ ಚನ್ನಮ್ಮ ಅವರ ಕರ್ಮಭೂಮಿ ಇದಾಗಿದೆ.- ಆರೂಢ ನಂದಿಹಾಳ ಗ್ರಾಮ:* ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲ್ಲೂಕಿನ ನಂದಿಹಾಳ ಪಿ.ಎಚ್. ಗ್ರಾಮದ ಹೆಸರನ್ನು 'ಆರೂಢ ನಂದಿಹಾಳ' ಎಂದು ನಾಮಕರಣ ಮಾಡಲು ಸಂಪುಟ ಸಭೆ ಒಪ್ಪಿಗೆ ನೀಡಿದೆ. ಗುರು ಆರೂಢರು ನಂದಿಹಾಳ ಗ್ರಾಮದಲ್ಲಿ ಜನಿಸಿ, ಹುಬ್ಬಳ್ಳಿಯ ಸಿದ್ದಾರೂಢರ ಪರಮ ಶಿಷ್ಯರೂ ಆಗಿದ್ದರು ಎಂದು ಪಾಟೀಲ ಅವರು ತಿಳಿಸಿದರು.* ಗೃಹ ಜ್ಯೋತಿ ಯೋಜನೆ ಅನುಷ್ಠಾನ ಆದೇಶ ಮಾರ್ಪಡಿಸಿ ಮಾಸಿಕ 48 ಯೂನಿಟ್‌ಗಿಂತ ಕಡಿಮೆ ಬಳಸುವ ಎಲ್‌ಟಿ2 ಗ್ರಾಹಕರಿಗೆ ಶೇ.10 ಬದಲು ಹೆಚ್ಚುವರಿ 10 ಯೂನಿಟ್ ಒದಗಿಸಲು ಸಂಪುಟ ಒಪ್ಪಿಗೆ.* ವಿಶ್ವವಿದ್ಯಾಲಯ ಮತ್ತು ಕಾಲೇಜುಗಳಲ್ಲಿ ಸಮಗ್ರ ವಿವಿ ಮತ್ತು ಕಾಲೇಜು ನಿರ್ವಹಣಾ ತಂತ್ರಾಂಶ 15.13 ಕೋಟಿ ರೂ. ವೆಚ್ಚದಲ್ಲಿ ಸಿದ್ಧಪಡಿಸಿ ಅನುಷ್ಠಾನಕ್ಕೆ ಅಚೀವ ಸಂಪುಟ ಒಪ್ಪಿಗೆ. 30 ಸೀಟರ್ ಕಾಲ್ ಸೆಂಟರ್ ಸ್ಥಾಪನೆಗೆ ನಿರ್ಧಾರ.* ಡಿಜಿಟಲ್ ಲ್ಯಾಂಡ್ ರೆಕಾಡ್ಸ್ ಯೋಜನೆಗೆ 3455 ಕಂಪ್ಯೂಟರ್, ಸ್ಕ್ಯಾನರ್, ರೋವರ್, ಪ್ರಿಂಟರ್‌ಗಳನ್ನು 30.45 ಕೋಟಿ ರೂ. ವೆಚ್ಚದಲ್ಲಿ ಖರೀದಿಗೆ ಸಚಿವ ಸಂಪುಟ ಒಪ್ಪಿಗೆ.