* ಕರ್ನಾಟಕ ಸರ್ಕಾರವು ರಾಜ್ಯ ಸರ್ಕಾರಿ ನೌಕರರಿಗೆ ನೀಡಲಾಗುವ ತುಟ್ಟಿಭತ್ಯೆಯನ್ನು ಜುಲೈ 1ರಿಂದಲೇ ಅನ್ವಯವಾಗಿ ಶೇ 3.75ರಷ್ಟು ಹೆಚ್ಚಳ ಮಾಡಲಾಗಿದೆ ಎಂದು ಸರಕಾರ ಅಕ್ಟೋಬರ್ 21 ರಂದು ಆದೇಶ ಹೊರಡಿಸಿದೆ.* ಪಿಂಚಣಿದಾರರಿಗೆ ಕೂಡ ಇದರ ಲಾಭ ಸಿಗಲಿದೆ. ಈ ಮೂಲಕ ನೌಕರರ ಮೂಲ ವೇತನದ ಶೇ 35 ರಿಂದ ಶೇ 38.75ಕ್ಕೆ ತುಟ್ಟಿಭತ್ಯೆ ಪರಿಷ್ಕರಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.* ಪಿಂಚಣಿದಾರರಿಗೂ ಈ ತುಟ್ಟಿಭತ್ಯೆ ಹೆಚ್ಚಳದ ಕ್ರಮದ ಲಾಭ ಸಿಗಲಿದೆ ಎಂದು ಆರ್ಥಿಕ ಇಲಾಖೆ ಜಂಟಿ ಕಾರ್ಯದರ್ಶಿ ಉಮಾ ಕೆ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.* ಯುಜಿಸಿ, ಎಐಸಿಟಿಇ, ಐಸಿಎಆರ್‌ ವೇತನ ಶ್ರೇಣಿಗಳ ಬೋಧಕ ಸಿಬ್ಬಂದಿ ಹಾಗೂ NJPC ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳ ತುಟ್ಟಿಭತ್ಯೆಯನ್ನು ಶೇ. 4 ರಷ್ಟು ಹೆಚ್ಚಿಸಿ (ಶೇ 46ಕ್ಕೆ ಪರಿಷ್ಕರಿಸಿ) ಸರ್ಕಾರ ಆದೇಶ ಹೊರಡಿಸಿದೆ. ಇದರಿಂದ ಸರ್ಕಾರಕ್ಕೆ ವಾರ್ಷಿಕ 1109 ಕೋಟಿ ಹೆಚ್ಚುವರಿ ವೆಚ್ಚವಾಗಲಿದೆ.