* ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳ ಹೆಸರನ್ನು ಬದಲಾಯಿಸುವ ನಿರ್ಣಯವನ್ನು ಕರ್ನಾಟಕ ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ.* ನಾಲ್ಕು ವಿಮಾನ ನಿಲ್ದಾಣಗಳಿಗೆ ಪ್ರಮುಖ ವ್ಯಕ್ತಿಗಳ ಹೆಸರಿಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವ ನಿರ್ಣಯ ಇದಾಗಿದೆ. ಈ ನಿರ್ಣಯ ಸರ್ವಾನುಮತದಿಂದ ಅಂಗೀಕಾರವಾಗಿದೆ.* ನಿರ್ಣಯದ ಪ್ರಕಾರ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳಗಾವಿಗೆ ಕಿತ್ತೂರು ರಾಣಿ ಚನ್ನಮ್ಮ, ಶಿವಮೊಗ್ಗಕ್ಕೆ ರಾಷ್ಟ್ರಕವಿ ಕುವೆಂಪು ಹಾಗೂ ವಿಜಯಪುರ ವಿಮಾನ ನಿಲ್ದಾಣಕ್ಕೆ ಜಗಜ್ಯೋತಿ ಬಸವಣ್ಣ ಹೆಸರು ನಾಮಕರಣ ಮಾಡುವಂತೆ ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡುವ ಪ್ರಸ್ತಾಪವನ್ನು ರಾಜ್ಯ ಸರಕಾರದಿಂದ ಸಲ್ಲಿಸಲು ಕೈಗೊಂಡಿರುವ ನಿರ್ಣಯಕ್ಕೆ ವಿಧಾನಸಭೆ ಸರ್ವಾನುಮತದಿಂದ ಡಿಸೆಂಬರ್ 14 ರಂದು ಅನುಮೋದನೆ ನೀಡಿತು.* ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 'ಕೋಟಿ ಚೆನ್ನಯ್ಯ' ಅವರ ಹೆಸರು ಇಡುವ ಕುರಿತು ಬಿಜೆಪಿ ಸದಸ್ಯ ಸುನೀಲ್ ಕುಮಾರ್ ಅವರು ನಿರ್ಧಾರ ಹೇಳಿದರು.* ಬ್ರಿಟಿಷರ ವಿರುದ್ಧ ಹೋರಾಡಿದ ಮೈಸೂರು ಹುಲಿ ಟಿಪ್ಪುಸುಲ್ತಾನ್ ಅವರ ಹೆಸರನ್ನು ಮೈಸೂರು ವಿಮಾನನಿಲ್ದಾಣಕ್ಕೆ ಇಡಬೇಕು ಎಂದು ಬಿಜೆಪಿ ಸದಸ್ಯರು ವಿರೋದಿಸಿದರು.