* ಅರಣ್ಯ ಇಲಾಖೆಯ ಪ್ರಸ್ತಾವನೆಗೆ ಸಚಿವ ಸಂಪುಟ ಉಪ ಸಮಿತಿ ಅಕ್ಟೋಬರ್ 11 ರಂದು ಮಾನವ-ಪ್ರಾಣಿ ಸಂಘರ್ಷವನ್ನು ಕಡಿಮೆ ಮಾಡಲು ಮತ್ತು ಅರಣ್ಯ ಭೂಮಿ ಒತ್ತುವರಿ ತಡೆಯಲು, ನಾಗರಹೊಳೆ ಸೇರಿದಂತೆ ರಾಜ್ಯದ ಆರು ಅರಣ್ಯ ಪ್ರದೇಶಗಳಲ್ಲಿ ಪರಿಸರ ಸೂಕ್ಷ್ಮ ವಲಯಗಳನ್ನು (ESZ) ಗುರುತಿಸಿ ಅನುಮೋದನೆ ನೀಡಿದೆ.* ಕಪ್ಪತ್ತಗುಡ್ಡ, ಬುಕ್ಕಾಪಟ್ಟಣ, ಕಾಮಸಂದ್ರ, ನಾಗರಹೊಳೆ, ಕಾವೇರಿ ವಿಸ್ತರಿತ ವನ್ಯಜೀವಿ ಧಾಮ ಸೇರಿ ರಾಜ್ಯದ 6 ಅರಣ್ಯ ಪ್ರದೇಶಗಳಲ್ಲಿ ಪರಿಸರ ಸೂಕ್ಷ್ಮ ಪ್ರದೇಶ ಘೋಷಿಸಲು ಸಂಪುಟ ಉಪಸಮಿತಿ ಸಭೆಯು ಅನುಮೋದನೆ ನೀಡಿದೆ.* ಕೇಂದ್ರ ಸರ್ಕಾರ 2011ರಲ್ಲಿ ಹೊರಡಿಸಿರುವ ಮಾರ್ಗಸೂಚಿಗಳು ಮತ್ತು ಕೇಂದ್ರ ಅರಣ್ಯ, ಪರಿಸರ ಸಚಿವಾಲಯ ಮಾರ್ಗಸೂಚಿಗಳ ಅನ್ವಯ ಪರಿಸರ ಸೂಕ್ಷ್ಮವಲಯಗಳಲ್ಲಿ ಅಭಿವೃದ್ಧಿ ಚಟುವಟಿಕೆಗಳು, ನಿರ್ಬಂಧಿತ ಚಟುವಟಿಕೆಗಳು ಮತ್ತು ನಿಷೇಧಿತ ಚಟುವಟಿಕೆಗಳು ಎಂದು ವರ್ಗೀಕರಿಸಲಾಗಿದೆ.