* ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೋಮವಾರ (ಡಿಸೆಂಬರ್ 23, 2024) ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (National Human Rights Commission-NHRC) ಅಧ್ಯಕ್ಷರಾಗಿ ತಮಿಳುನಾಡಿನ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶ ವಿ. ರಾಮಸುಬ್ರಮಣಿಯನ್ ಅವರನ್ನು ನೇಮಕ ಮಾಡಿದ್ದಾರೆ.* ನ್ಯಾಯಮೂರ್ತಿ (ನಿವೃತ್ತ) ಅರುಣ್ ಕುಮಾರ್ ಮಿಶ್ರಾ ಅವರು ತಮ್ಮ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ ನಂತರ ಜೂನ್ 1, 2024 ರಿಂದ ಎನ್‌ಎಚ್‌ಆರ್ಸಿ ಅಧ್ಯಕ್ಷರ ಹುದ್ದೆ ಖಾಲಿ ಇತ್ತು. ಎನ್‌ಎಚ್‌ಆರ್ಸಿ ಸದಸ್ಯೆ ವಿಜಯ ಭಾರತಿ ಸಯಾನಿ ಅವರು ಆಯೋಗದ ಹಂಗಾಮಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.* ಆಯ್ಕೆ ಸಮಿತಿಯ ಶಿಫಾರಸಿನ ಆಧಾರದ ಮೇಲೆ ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಅಥವಾ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಯನ್ನು ಮಾನವ ಹಕ್ಕುಗಳ ಸಮಿತಿಯ ಮುಖ್ಯಸ್ಥರನ್ನಾಗಿ ನೇಮಿಸಲಾಗುತ್ತದೆ.*  ಮಾಜಿ ಮುಖ್ಯ ನ್ಯಾಯಮೂರ್ತಿಗಳಾದ ಎಚ್.ಎಲ್.ದತ್ತು ಮತ್ತು ಕೆ.ಜಿ.ಬಾಲಕೃಷ್ಣನ್ ಅವರು ಈ ಹಿಂದೆ ಎನ್‌ಎಚ್‌ಆರ್‌ಸಿ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದಾರೆ.* ನ್ಯಾಯಮೂರ್ತಿ ರಾಮಸುಬ್ರಮಣಿಯನ್ ಅವರು ಮದ್ರಾಸ್ ಕಾನೂನು ಕಾಲೇಜಿನಲ್ಲಿ ಕಾನೂನು ಪೂರ್ಣಗೊಳಿಸಿದರು ಮತ್ತು ಫೆಬ್ರವರಿ 16, 1983 ರಂದು ಬಾರ್‌ನ ಸದಸ್ಯರಾಗಿ ಸೇರಿಕೊಂಡರು.* ಅವರು ಮದ್ರಾಸ್ ಹೈಕೋರ್ಟ್‌ನಲ್ಲಿ ಸುಮಾರು 23 ವರ್ಷಗಳ ಕಾಲ ಅಭ್ಯಾಸ ಮಾಡಿದರು. ಅವರು ಜುಲೈ 31, 2006 ರಂದು ಮದ್ರಾಸ್ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರಾಗಿ ಮತ್ತು ನವೆಂಬರ್ 9, 2009 ರಂದು ಕಾಯಂ ನ್ಯಾಯಾಧೀಶರಾಗಿ ನೇಮಕಗೊಂಡರು.