* 77ನೇ ಸ್ವಾತಂತ್ರೋತ್ಸವ ನಿಮಿತ್ತ ರಾಷ್ಟ್ರಪತಿ ದೌಪದಿ ಮುರ್ಮು ಅವರು ಆಗಸ್ಟ್ 14ರಂದು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದರು.* ರಾಷ್ಟ್ರಪತಿ ದೌಪದಿ ಮುರ್ಮು ಜಾಗತಿಕ ಹವಾಮಾನ ಬದಲಾವಣೆ ಮತ್ತು ಹವಾಮಾನ ವೈಪರೀತ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ, ವಿಜ್ಞಾನ ಅಥವಾ ಜ್ಞಾನವು ಜನರ ಒಳಿತಿಗಾಗಿ ಇರುವ ಒಂದು ಸಾಧನ ಎಂದೂ ಅಭಿಪ್ರಾಯಪಟ್ಟಿದ್ದಾರೆ.* ಜಿ-20 ರಾಷ್ಟ್ರಗಳ ಗುಂಪಿನ ಅಧ್ಯಕ್ಷತೆಯನ್ನು ಭಾರತ ವಹಿಸಿರುವ ಬಗ್ಗೆ ಪ್ರಸ್ತಾಪಿಸಿದ ಮುರ್ಮು ಅವರು ಭಾರತವು ವಿಶ್ವದಾದ್ಯಂತ ಅಭಿವೃದ್ಧಿ ಮತ್ತು ಮಾನವೀಯ ಮೌಲ್ಯಗಳನ್ನು ಉತ್ತೇಜಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿದೆ ಎಂದು ವ್ಯಕ್ತಪಡಿಸಿದರು.