* ಪ್ರಸಕ್ತ ಸಾಲಿನ ಸ್ವಚ್ಛತೆಯೇ ಸೇವೆ ಅಭಿಯಾನ ಸೆಪ್ಟೆಂಬರ್.14ರಿಂದ ಅಕ್ಟೋಬರ್.1ರವರೆಗೆ ಆಯೋಜಿಸಲು ಕೇಂದ್ರ ಕೇಂದ್ರ ಸರ್ಕಾರ ನಿರ್ದೇಶನ ನೀಡಿದೆ. ಈ ಬಾರಿ ಧೈಯ ವಾಕ್ಯವನ್ನು 'ಸ್ವಭಾವ ಸ್ವಚ್ಛತಾ, ಸಂಸ್ಕಾರ ಸ್ವಚ್ಛತಾ' ಎಂದು ಘೋಷಿಸಲಾಗಿದೆ. * ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ನಡೆಸಬೇಕಾದ ಚಟುವಟಿಕೆಗಳ ಬಗ್ಗೆ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಸಂಸ್ಥೆ (ಎಐಸಿಟಿಇ), ವಿಶ್ವವಿದ್ಯಾಲಯ ಧನ ಸಹಾಯ ಆಯೋಗ (ಯುಜಿಸಿ) ನಿರ್ದೇಶನಗಳನ್ನು ನೀಡಿವೆ.* ಈ ಅಭಿಯಾನದ ಪ್ರಮುಖ ಚಟುವಟಿಕೆಗಳು: ಸ್ವಚ್ಛತೆಗಾಗಿ ಸಹಭಾಗಿತ್ವ, ಶ್ರಮದಾನದಿಂದ ಸಂಪೂರ್ಣ ಸ್ವಚ್ಛತೆ, ಸಫಾಯಿ ಮಿತ್ರ ಸುರಕ್ಷತಾ ಶಿಬಿರ ಆಯೋಜಿಸಲು ತಿಳಿಸಲಾಗಿದೆ. ಅಕ್ಟೋಬರ್ 2ರಂದು ಸ್ವಚ್ಛ ಭಾರತ ದಿನ ಆಚರಿಸುವಂತೆ ತಿಳಿಸಲಾಗಿದೆ.* ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ 1,500 ಗಿಡಗಳನ್ನು ನೆಡುವ ಗುರಿ ಹೊಂದಲಾಗಿದೆ. ಅರಣ್ಯ ಇಲಾಖೆಯಿಂದ ಗಿಡಗಳನ್ನು ಒದಗಿಸಲಾಗುವುದು. ಮಾನವ ಸರಪಳಿ, ಜಾಥಾ ಹಾಗೂ ವೇದಿಕೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು.* ಸ್ವಚ್ಛತಾ ಆಂದೋಲನ ಅರಿವು ಜಾಗೃತಿಯು ಜನರಿಗೆ ವೇಗವಾಗಿ, ದೃಢವಾಗಿ ತಲುಪಬೇಕು. ಸಾರ್ವಜನಿಕರಿಗೆ ಬೀದಿ ನಾಟಕಗಳ ಮೂಲಕ ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸಬೇಕು ಎಂದರು.