* ಶಾಲೆಗಳಲ್ಲಿ ಭಗವದ್ಗೀತೆ ಬೋಧಿಸುವ ಶಿಕ್ಷಣ ಇಲಾಖೆಯ ಇತ್ತೀಚಿನ ನಿರ್ಧಾರವನ್ನು ಯಶಸ್ವಿಯಾಗಿ ಜಾರಿ ಮಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ಣಯವನ್ನು ಗುಜರಾತ್ ವಿಧಾನಸಭೆಯಲ್ಲಿ ಫೆಬ್ರುವರಿ 07 ರಂದು ಸರ್ವಾನುಮತದಿಂದ ಅಂಗೀಕರಿಸಲಾಗಿದೆ. * ಶ್ರೀಮದ್ ಭಗವದ್ಗೀತೆಯಲ್ಲಿ ಅಡಕವಾಗಿರುವ ಮೌಲ್ಯಗಳು ಮತ್ತು ತತ್ವಗಳನ್ನು 6ರಿಂದ 12ನೇ ತರಗತಿವರೆಗೆ ಶಾಲೆಗಳಲ್ಲಿ ಬೋಧಿಸಲಾಗುವುದು.* ರಾಷ್ಟ್ರೀಯ ಶಿಕ್ಷಣ ನೀತಿ 2020 ವಿದ್ಯಾರ್ಥಿಗಳಲ್ಲಿ ಭಾರತದ ಶ್ರೀಮಂತ ಮತ್ತು ವೈವಿಧ್ಯಮಯ ಸಂಸ್ಕೃತಿ ಮತ್ತು ಜ್ಞಾನ ವ್ಯವಸ್ಥೆಗಳು ಮತ್ತು ಸಂಪ್ರದಾಯಗಳಿಗೆ ಹೆಮ್ಮೆಯ ಭಾವನೆ ಹಾಗೂ ಸಂಪರ್ಕವನ್ನು ಬೆಳೆಸಲು ಒತ್ತು ನೀಡುತ್ತದೆ. * ಭಾರತೀಯ ಸಂಸ್ಕೃತಿಯನ್ನು ವಿದ್ಯಾರ್ಥಿಗಳ ದೈನಂದಿನ ಜೀವನದಲ್ಲಿ ಸಂಯೋಜಿಸುವುದು ಅತ್ಯಗತ್ಯ, ಇದರಿಂದ ಅವರು ಭಾರತೀಯ ಸಂಸ್ಕೃತಿಯ ಶ್ರೀಮಂತ ಪರಂಪರೆಗೆ ತೆರೆದುಕೊಳ್ಳುತ್ತಾರೆ ಮತ್ತು ಭಾರತೀಯರಾಗಿರುವುದಕ್ಕೆ ಹೆಮ್ಮೆಪಡುತ್ತಾರೆ. ಇದಕ್ಕಾಗಿ, ಶ್ರೀಮದ್ ಭಗವದ್ಗೀತೆಯಲ್ಲಿ ಅಡಕವಾಗಿರುವ ಮೌಲ್ಯಗಳು ಮತ್ತು ತತ್ವಗಳನ್ನು ಶಾಲೆಗಳಲ್ಲಿ ಬೋಧಿಸಲು ನಿರ್ಧರಿಸಲಾಗಿದೆ.*  ಭಾರತೀಯ ಸಂಸ್ಕೃತಿ ಮತ್ತು ಜ್ಞಾನ ವ್ಯವಸ್ಥೆಯನ್ನು ಶಾಲಾ ಪಠ್ಯಕ್ರಮದಲ್ಲಿ ಸೇರಿಸಬೇಕು. ಈ ಸಂಪರ್ಕವು ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಸಹಾಯ ಮಾಡುತ್ತದೆ.* 6 ರಿಂದ 12 ನೇ ತರಗತಿಯ ಪಠ್ಯಕ್ರಮದಲ್ಲಿ ಭಗವದ್ಗೀತೆಯ ಬೋಧನೆಗಳನ್ನು ಸೇರಿಸಲು ರಾಜ್ಯ ಸರ್ಕಾರವು ನಿರ್ಧರಿಸಿದೆ ಎಂದು ಶಿಕ್ಷಣ ಸಚಿವ ಪ್ರಫುಲ್ ಪನ್ಶೇರಿಯಾ ಅವರು ಸದನಕ್ಕೆ ತಿಳಿಸಿದರು.