* ಕಂದಾಯ ಇಲಾಖೆ ಸಚಿವ ಕೃಷ್ಣ ಬೈರೇಗೌಡ ರವರು ಒತ್ತುವರಿ ತೆರವುಗೊಳಿಸಿದ ಜಮೀನುಗಳ ಬಗ್ಗೆ ನಿಗಾವಹಿಸಲು ಪೊಲೀಸರ ಬೀಟ್‌ ಮಾದರಿಯಲ್ಲಿ ಕಂದಾಯ ಇಲಾಖೆ ಅಧಿಕಾರಿಗಳನ್ನು ಬಳಸಿಕೊಂಡು ಬೀಟ್‌ ವ್ಯವಸ್ಥೆ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.* ಪ್ರತಿ ತಿಂಗಳು ಒತ್ತುವರಿ ತೆರವು ಅಭಿಯಾನ ನಡೆಸಲಾಗುವುದು. ಅಧಿಕಾರಿಗಳಿಗೆ ಗುರಿ ನಿಗದಿ ಪಡಿಸಿ ಖಾಸಗಿ ವ್ಯಕ್ತಿಗಳಿಂದ ಒತ್ತುವರಿಯಾಗಿರುವ ಸರ್ಕಾರಿ ಜಮೀನು ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲು ಕ್ರಮ ಕೈಗೊಳ್ಳುವುದಾಗಿ ಹೇಳಿದರು.